ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ).ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್
ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿ ನ ಪದವಿಪೂರ್ವ ವಿಭಾಗದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ಮತ್ತು ವ್ಯಸನ ನಿವಾರಣೆ ಮತ್ತು ನಿಯಂತ್ರಣ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲಗಳ ವ್ಯಕ್ತಿಯಾಗಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ವಿಂದ್ಯಾಶ್ರೀ.ಎ ಮಾತನಾಡಿ ಭವಿಷ್ಯದ ಆಶಾಕಿರಣ ಯುವಜನತೆಯನ್ನು ಆವರಿಸಿಕೊಂಡಿರುವ ಮಾದಕ ದ್ರವ್ಯ ಗಳು ಒಂದು ಗಂಭೀರ ಹಾಗೂ ಜಾಗತಿಕ ಸಮಸ್ಯೆ ಯಾಗಿ ಹೊಸ ಪಿಡುಗುಗಳಾಗಿ ಸಮಾಜದ ಸ್ವಾಸ್ಥ್ಯವನ್ನು ಕೆಡುಸುತ್ತಿರುವುದು ನಿಜಕ್ಕೂ ಆತಂಕಕಾರಿ ಹಾಗೂ ನಾವೆಲ್ಲರೂ ಒಟ್ಟಾಗಿ ಸಮಾಜವನ್ನು ಸಬಲೀಕರಣಗೊಳಿಸೋಣ, ಮಾದಕ ದ್ರವ್ಯಗಳನ್ನು ತ್ಯಜಸೋಣ ಮತ್ತು ಆರೋಗ್ಯಕರ ಭಾರತವನ್ನು ನಿರ್ಮಿಸೋಣ ಎಂದು ಕರೆ ನೀಡಿದರು.
ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.
ವಿದ್ಯಾಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥೆಯಾದ ದೀಕ್ಷಿತಾ , ಪದವಿ ಪೂರ್ವ ವಿಭಾಗದ ಮುಖ್ಯಸ್ಥೆಯಾದ ಶ್ರೀಮತಿ ಸೌಮ್ಯ ಎನ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.












