23.6 C
ಪುತ್ತೂರು, ಬೆಳ್ತಂಗಡಿ
June 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಲ್ಯಾಡಿಯಲ್ಲಿ ಉದನೆ ವಲಯ ಮಟ್ಟದ ಮಾತೃಸಂಗಮ ‘ಫಿದೆಲಿಯುಂ–2026’

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಉದನೆ ವಲಯ ಮಟ್ಟದ ಮಾತೆಯರ ಒಕ್ಕೂಟದ ವಾರ್ಷಿಕ ಮಾತೃಸಂಗಮ ‘ಫಿದೆಲಿಯುಂ–2026’ ಕಾರ್ಯಕ್ರಮವು ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಂದನೀಯ ಫಾ. ಜೋಬಿ ಪುಲ್ಲಾಟ್ ಉದ್ಘಾಟಿಸಿ, ಉತ್ತಮ ಸಮಾಜ ಮತ್ತು ಕುಟುಂಬ ನಿರ್ಮಾಣದಲ್ಲಿ ಮಾತೆಯರ ಧಾರ್ಮಿಕ ಹಾಗೂ ಮೌಲ್ಯಾಧಾರಿತ ಪಾತ್ರದ ಮಹತ್ವವನ್ನು ಹೇಳಿದರು. ಇಂದಿನ ಮಕ್ಕಳ ಬೆಳವಣಿಗೆಯಲ್ಲಿ ಮಾತೆಯರು ಪ್ರೇರಕಶಕ್ತಿಯಾಗಿ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ನಾಲ್ಕು ಮತ್ತು ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ದಂಪತಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಫಾ. ರಿಜೊ ಒಡೋಪಲ್ಲಿ, ಸಿಸ್ಟರ್ ಲಿಸ್ ಮ್ಯಾಥ್ಯೂ ಎಸ್.ಎಚ್., ರೇಖಾ ಅಡ್ಡಹೊಳೆ, ಸಿಮಿ ಆರ್ಲ, ಸುಜಾ ಜೇಮ್ಸ್ ಹಾಗೂ ಫಾ. ಶಾಜಿ ಮ್ಯಾಥ್ಯೂ ವಿವಿಧ ವಿಚಾರಗಳನ್ನು ಮಂಡಿಸಿದರು.

ಮಿನಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ನೆಲ್ಯಾಡಿ, ಆರ್ಲ, ಇಚಿಲಂಪಾಡಿ, ಉದನೆ, ಶಿರಾಡಿ, ಅಡ್ಡಹೊಳೆ ಹಾಗೂ ಅರಸೀನಮಕ್ಕಿ ಚರ್ಚ್‌ಗಳ ಮಾತೆಯರು ಭಾಗವಹಿಸಿದರು.

Related posts

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya

‘ಗೀತಗಾಯನ’ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮಾಜಿ ಶಾಸಕ ದಿ| ವಸಂತ ಬಂಗೇರರಿಗೆ ನುಡಿನಮನ

Suddi Udaya

ಬೆಳಾಲು ಎಸ್.ಡಿ.ಎಂ ಶಾಲೆ: ಅಭಿನಂದನಾ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!