23.6 C
ಪುತ್ತೂರು, ಬೆಳ್ತಂಗಡಿ
June 28, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹಳೇಪೇಟೆ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ : ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಇದರ ಅಂಗ ಸಂಸ್ಥೆಯಾದ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್, ಹಳೇಪೇಟೆ ಇದರ ಮಹಾಸಭೆಯು ಶುಕ್ರವಾರ ಜುಮಾ ನಮಾಝಿನ ಬಳಿಕ ಮದರಸದ ಹಾಲ್‌ನಲ್ಲಿ ನಡೆಯಿತು.

ಶಾಕಿರ್ ಉಜಿರೆ ದುಆ ನೆರವೇರಿಸುವ ಮೂಲಕ ಸಭೆಗೆ ಚಾಲನೆ ನೀಡಿದರು. ಬಳಿಕ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಇದರ ಕಾರ್ಯದರ್ಶಿ ಫಝಲ್ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು. ಬಳಿಕ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಶಾಕಿರ್ ಉಜಿರೆ, ಕಾರ್ಯದರ್ಶಿಯಾಗಿ ಸಹಲ್ ನೀರ್ಸಾಲ್, ಉಪಾಧ್ಯಕ್ಷರಾಗಿ ಅಶ್ರಫ್ ಕುಂಟಿನಿ ಹಾಗೂ ಶಕೀಬ್ ಕುಂಟಿನಿ, ಜೊತೆ ಕಾರ್ಯದರ್ಶಿಯಾಗಿ ಅಲ್ಫಾಝ್ ಕುಂಟಿನಿ ಮತ್ತು ಕೋಶಾಧಿಕಾರಿಯಾಗಿ ಮುಬೀನ್ ಅತ್ತಾಜೆ ಆಯ್ಕೆಯಾದರು.

ಸಲಹೆಗರರಾಗಿ ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಆಡಳಿತ ಸಮಿತಿಯ ಅಧ್ಯಕ್ಷರು ಅಬೂಬಕ್ಕರ್ ಸುಪ್ರೀಂ, ಕಾರ್ಯದರ್ಶಿ ಹಾರಿಸ್ , ಬಿ.ಎಂ. ಹನೀಫ್ ಮತ್ತು ಹನೀಫ್ ಯು.ಕೆ. ಹಾಗೂ ದಾವೂದ್ ಆಯ್ಕೆಯಾದರು.

ಮಹಾಸಭೆಯಲ್ಲಿ ಕೇಂದ್ರ ಕರಿಯದ ಹಾಗೂ ಉಜಿರೆ, ಕಕ್ಕೇಜಲ್, ಕುಂಟಿನಿ, ಅತ್ತಾಜೆ ಮತ್ತು ಕಕ್ಕಿಯಾನ ಕರಿಯದ ಯಂಗ್ ಮೆನ್ಸ್‌ನ ಸರ್ವ ಸದಸ್ಯರು ಹಾಗೂ ಜಮಾಅತ್‌ನ ಯುವಕರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಆಡಳಿತ ಸಮಿತಿಯ ಅಧ್ಯಕ್ಷರು ಅಬೂಬಕ್ಕರ್ ಸುಪ್ರೀಂ, ಕಾರ್ಯದರ್ಶಿ ಹಾರಿಸ್ , ಜೊತೆ ಕಾರ್ಯದರ್ಶಿ ಹಂಝ, ಸದಸ್ಯ ಕಾದರ್ ಎಸ್.ಎ, ಕೋಶಾಧಿಕಾರಿ ಮೊಹಮ್ಮದ್ ಸಅದಿ ಉಪಸ್ಥಿತರಿದ್ದರು.

Related posts

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ರಾಜ್ಯ ಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶಕ್ಕೆ ಬೆಳ್ತಂಗಡಿಯಿಂದ 10 ಸಾವಿರ ಕಾರ್ಯಕರ್ತರು ಭಾಗವಹಿಸುವಿಕೆ: ರಕ್ಷಿತ್ ಶಿವರಾಮ್

Suddi Udaya
error: Content is protected !!