23.5 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಹೃದಯ ರೋಗಿಗೆ ಧನಸಹಾಯ ಹಸ್ತಾಂತರ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಕಾರುಣ್ಯ ಸ್ಪರ್ಶಂ ಯೋಜನೆಯಡಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಚಿನ್ನಮ್ಮ, ಕೊಚ್ಚುಪರಂಬಿಲ್, ಕೆರೆಕೋಡಿ ಮನೆ ಅವರ ಚಿಕಿತ್ಸೆಗೆ ರೂ.50,000 ಧನಸಹಾಯವನ್ನು ಜೂ.28ರಂದು ಅವರ ಸೊಸೆಯಾದ ಸೌಮ್ಯ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಗಸ್ಟೀನ್ ಟಿ.ಎ. ಮಾತನಾಡಿ, “ಸಂಕಷ್ಟದಲ್ಲಿರುವವರಿಗೆ ನೆರವಾಗುವುದು ನಮ್ಮ ಸಂಘಟನೆಯ ಪ್ರಮುಖ ಧ್ಯೇಯವಾಗಿದೆ. ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ. ಅವರು, “ಸದಸ್ಯರು ಹಾಗೂ ದಾನಿಗಳ ಉದಾರ ಸಹಕಾರದಿಂದ ಈ ನೆರವು ನೀಡಲು ಸಾಧ್ಯವಾಗಿದೆ. ಸಹಕರಿಸಿದ ಎಲ್ಲರಿಗೂ ಸಂಘದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು” ಎಂದು ಹೇಳಿದರು.

ಕಾರ್ಯದರ್ಶಿ ಶಿಜೋ ಜೋಸೆಫ್ ಅವರು, “ಕಾರುಣ್ಯ ಸ್ಪರ್ಶಂ ಯೋಜನೆಗೆ ಸ್ಪಂದಿಸಿ ನೆರವು ನೀಡಿದ ಎಲ್ಲಾ ದಾನಿಗಳು, ಸದಸ್ಯರು ಹಾಗೂ ಹಿತೈಷಿಗಳ ಸಹಕಾರದಿಂದ ಈ ಮಾನವೀಯ ಕಾರ್ಯ ಯಶಸ್ವಿಯಾಗಿದೆ. ಮುಂದೆಯೂ ಅಗತ್ಯವಿರುವವರಿಗೆ ನೆರವಾಗುವ ಸಮಾಜಮುಖಿ ಕಾರ್ಯಗಳನ್ನು ಸಂಘದ ವತಿಯಿಂದ ಮುಂದುವರಿಸಲಾಗುವುದು” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯ ಸಹ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಎಂ ಸೇವಾ ನಿವೃತ್ತಿ

Suddi Udaya

ಉರುವಾಲುಪದವು: ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

Suddi Udaya
error: Content is protected !!