23.8 C
ಪುತ್ತೂರು, ಬೆಳ್ತಂಗಡಿ
June 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಹೃದಯ ರೋಗಿಗೆ ಧನಸಹಾಯ ಹಸ್ತಾಂತರ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಕಾರುಣ್ಯ ಸ್ಪರ್ಶಂ ಯೋಜನೆಯಡಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಚಿನ್ನಮ್ಮ, ಕೊಚ್ಚುಪರಂಬಿಲ್, ಕೆರೆಕೋಡಿ ಮನೆ ಅವರ ಚಿಕಿತ್ಸೆಗೆ ರೂ.50,000 ಧನಸಹಾಯವನ್ನು ಜೂ.28ರಂದು ಅವರ ಸೊಸೆಯಾದ ಸೌಮ್ಯ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಗಸ್ಟೀನ್ ಟಿ.ಎ. ಮಾತನಾಡಿ, “ಸಂಕಷ್ಟದಲ್ಲಿರುವವರಿಗೆ ನೆರವಾಗುವುದು ನಮ್ಮ ಸಂಘಟನೆಯ ಪ್ರಮುಖ ಧ್ಯೇಯವಾಗಿದೆ. ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ. ಅವರು, “ಸದಸ್ಯರು ಹಾಗೂ ದಾನಿಗಳ ಉದಾರ ಸಹಕಾರದಿಂದ ಈ ನೆರವು ನೀಡಲು ಸಾಧ್ಯವಾಗಿದೆ. ಸಹಕರಿಸಿದ ಎಲ್ಲರಿಗೂ ಸಂಘದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು” ಎಂದು ಹೇಳಿದರು.

ಕಾರ್ಯದರ್ಶಿ ಶಿಜೋ ಜೋಸೆಫ್ ಅವರು, “ಕಾರುಣ್ಯ ಸ್ಪರ್ಶಂ ಯೋಜನೆಗೆ ಸ್ಪಂದಿಸಿ ನೆರವು ನೀಡಿದ ಎಲ್ಲಾ ದಾನಿಗಳು, ಸದಸ್ಯರು ಹಾಗೂ ಹಿತೈಷಿಗಳ ಸಹಕಾರದಿಂದ ಈ ಮಾನವೀಯ ಕಾರ್ಯ ಯಶಸ್ವಿಯಾಗಿದೆ. ಮುಂದೆಯೂ ಅಗತ್ಯವಿರುವವರಿಗೆ ನೆರವಾಗುವ ಸಮಾಜಮುಖಿ ಕಾರ್ಯಗಳನ್ನು ಸಂಘದ ವತಿಯಿಂದ ಮುಂದುವರಿಸಲಾಗುವುದು” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.

Related posts

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya
error: Content is protected !!