
ಬೆಳ್ತಂಗಡಿ: ಲಯನ್ಸ್ ಅಮೃತ ಬಿಂದು ಸೇವಾ ಯೋಜನೆ ಯಡಿಯಲ್ಲಿ ತಾಲೂಕಿನ ವಿವಿಧ ಶಾಲೆಗಳಿಗೆ ನೀಡುತ್ತಿರುವ ಬರೆಯುವ ಪುಸ್ತಕ ವಿತರಣಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿ ಇಲ್ಲಿ ಜರುಗಿತು. ಇದರ ಉದ್ಘಾಟನೆಯನ್ನು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಡಾ. ರಾಜಶ್ರೀ ಬಿ. ಯವರು ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಬಸವಲಿಂಗಪ್ಪ ಭಾಗವಹಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪರವರು ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹರೀಶ್ ಮಜಲು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಮಾನಂದ ಬಿ, ಲಯನ್ಸ್ ಕ್ಲಬ್ ಬೆಳ್ತಂಗಡಿ ನಿಯೋಜಿತ ಅಧ್ಯಕ್ಷರಾದ ರಘುರಾಮ ಶೆಟ್ಟಿ, ಜತೆ ಕಾರ್ಯದರ್ಶಿ ನಾಣ್ಯಪ್ಪ ನಾಯ್ಕ್, ಕಾರ್ಯಕ್ರಮ ಸಂಯೋಜಕ ವಸಂತ್ ಶೆಟ್ಟಿ ಶ್ರದ್ದಾ, ಲಯನ್ಸ್ ಸದಸ್ಯರುಗಳಾದ ರಾಮಕೃಷ್ಣ ಗೌಡ, ಗೋಪಾಲಕೃಷ್ಣ ಕಾಂಚೋಡು, ರವೀಂದ್ರ ಶೆಟ್ಟಿ ಬಳಂಜ, ಮನೋರಮ ಮುರಳಿ ಬಲಿಪ, ಮಂದಾರ ಬಲಿಪ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಅಮಿತಾನಂದ ಹೆಗ್ಡೆ ಸ್ವಾಗತಿಸಿದರು. ಲಯನ್ ರಮೇಶ್ ಫೈಲಾರ್ ರವರು ಧನ್ಯವಾದ ನೀಡಿದರು ಶಾಲಾ ಶಿಕ್ಷಕಿ ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು.












