26.1 C
ಪುತ್ತೂರು, ಬೆಳ್ತಂಗಡಿ
June 28, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡದಲ್ಲಿ ವಾಹನ ದಟ್ಟನೆಗೆ ಸವಾರರು ಹೈರಾಣು

ಬೆಳ್ತಂಗಡಿ: ಉಜಿರೆ ಪೆರಿಯಶಾಂತಿ ಸ್ಪರ್ ರಸ್ತೆಯ ಕಾಪಿನಬಾಗಿಲಿನಿಂದ ಕೊಕ್ಕಡ ಜಂಕ್ಷನ್ ತನಕ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಬಸವಳಿದ ಬಗ್ಗೆ ಜೂ. 28 ರಂದು ವರದಿಯಾಗಿದೆ.

ವಾರಂತ್ಯದ ಹಾಗೂ ಸರಣಿ ರಜೆಯಿಂದ ಧರ್ಮಸ್ಥಳ, ಸೌತಡ್ಕ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸುವ ಯಾತ್ರರ್ಥಿಗಳ ಸಂಖ್ಯೆ ಹೆಚ್ಚಿದ ಕಾರಣ ಕೊಕ್ಕಡ ಪೇಟೆಯಿಂದ ಕಾಪಿನಬಾಗಿಲಿನವರೆಗೆ ರಸ್ತೆಯ ಎರಡು ಬದಿ ವಾಹನ ದಟ್ಟನೆಯಿಂದ ಗಂಟೆಗಟ್ಟಲೆ ಪ್ರಯಾಣಿಕರು ಜಡಿ ಮಳೆಯೊಂದಿಗೆ ರಸ್ತೆ ನಡುವೆ ಸಿಲುಕಿಕೊಂಡಿದ್ದರು. ಬೆಂಗಳೂರು, ಹಾಸನ ಭಾಗದ ಬಸ್ ಗಳು, ಟೂರಿಸ್ಟ್ ವಾಹನ, ಆ ಭಾಗದ ಗ್ರಾಮೀಣ ಪ್ರದೇಶದ ಜನರು ತೀವ್ರ ಸಂಕಷ್ಟ ಅನುಭವಿಸಿದರು.

ಸೌತಡ್ಕ ಮಹಾಗಣಪತಿ ಕ್ಷೇತ್ರಕದ ದ್ವಾರದ ಬಳಿ ಟ್ರಾಫಿಕ್ ಕಿರಿಕಿರಿ ಉಂಟಾಗಿ ಆ ಕಡೆಯಿಂದ ಬರುವ ಹಾಗೂ ಹೋಗುವ ವಾಹನಳು ಆಚೆ ಇಚೆ ಹೋಗಲಾರದೆ ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಾಕಿಗೊಂಡಿತ್ತು. ಟ್ರಾಫಿಕ್ ಕಿರಿಕಿರಿಯನ್ನು ತಪ್ಪಿಸಲು ಪೊಲೀಸರು ಇಲ್ಲದೇ ಬಸ್ ನಿರ್ವಹಾಕರು ಸಾರ್ವಜನಿಕರು ಕ್ಲಿಯರ್ ಮಾಡಬೇಕಾದ ಪರಿಸ್ಥಿತಿ ಇದೆ ಹಾಗಾಗಿ ಪೊಲೀಸ್ ಇಲಾಖೆ ಇಲ್ಲಿಗೆ ಟ್ರಾಫಿಕ್ ಪೊಲೀಸರನ್ನು ನಿಯೋಜಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹೆಚ್ಚಿನ ವಾರಂತ್ಯದಲ್ಲಿ ಕೊಕ್ಕಡ ಪೇಟೆ ಟ್ರಾಫಿಕ್ ಜಾಮ್ ಗೆ ಒಳಗಾಗುತ್ತಿದೆ. ಇಂದು ಹಾಲು ತರಲು ಪೇಟೆಗೆ ಹೋದಲ್ಲಿ ವಾಹನ ದಟ್ಟನೆಯಿಂದ ಒಂದು ಗಂಟೆ ಬಳಿಕ ಮನೆ ಸೇರುವ ಪರಿಸ್ಥಿತಿ, ಪ್ರತಿ ಭಾರಿ ಸಮಸ್ಯೆ ಎದುರಿಸುತ್ತಿದ್ದೇವೆ ಎನ್ನುತ್ತಾರೆ ಸಾರ್ವಜನಿಕರು.

Related posts

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ವಾಣಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!