ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಕಾರುಣ್ಯ ಸ್ಪರ್ಶಂ ಯೋಜನೆಯಡಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಚಿನ್ನಮ್ಮ, ಕೊಚ್ಚುಪರಂಬಿಲ್, ಕೆರೆಕೋಡಿ ಮನೆ ಅವರ ಚಿಕಿತ್ಸೆಗೆ ರೂ.50,000 ಧನಸಹಾಯವನ್ನು ಜೂ.28ರಂದು ಅವರ ಸೊಸೆಯಾದ ಸೌಮ್ಯ ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಗಸ್ಟೀನ್ ಟಿ.ಎ. ಮಾತನಾಡಿ, “ಸಂಕಷ್ಟದಲ್ಲಿರುವವರಿಗೆ ನೆರವಾಗುವುದು ನಮ್ಮ ಸಂಘಟನೆಯ ಪ್ರಮುಖ ಧ್ಯೇಯವಾಗಿದೆ. ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.
ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ. ಅವರು, “ಸದಸ್ಯರು ಹಾಗೂ ದಾನಿಗಳ ಉದಾರ ಸಹಕಾರದಿಂದ ಈ ನೆರವು ನೀಡಲು ಸಾಧ್ಯವಾಗಿದೆ. ಸಹಕರಿಸಿದ ಎಲ್ಲರಿಗೂ ಸಂಘದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು” ಎಂದು ಹೇಳಿದರು.
ಕಾರ್ಯದರ್ಶಿ ಶಿಜೋ ಜೋಸೆಫ್ ಅವರು, “ಕಾರುಣ್ಯ ಸ್ಪರ್ಶಂ ಯೋಜನೆಗೆ ಸ್ಪಂದಿಸಿ ನೆರವು ನೀಡಿದ ಎಲ್ಲಾ ದಾನಿಗಳು, ಸದಸ್ಯರು ಹಾಗೂ ಹಿತೈಷಿಗಳ ಸಹಕಾರದಿಂದ ಈ ಮಾನವೀಯ ಕಾರ್ಯ ಯಶಸ್ವಿಯಾಗಿದೆ. ಮುಂದೆಯೂ ಅಗತ್ಯವಿರುವವರಿಗೆ ನೆರವಾಗುವ ಸಮಾಜಮುಖಿ ಕಾರ್ಯಗಳನ್ನು ಸಂಘದ ವತಿಯಿಂದ ಮುಂದುವರಿಸಲಾಗುವುದು” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.












