24.6 C
ಪುತ್ತೂರು, ಬೆಳ್ತಂಗಡಿ
June 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಹೃದಯ ರೋಗಿಗೆ ಧನಸಹಾಯ ಹಸ್ತಾಂತರ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಕಾರುಣ್ಯ ಸ್ಪರ್ಶಂ ಯೋಜನೆಯಡಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಚಿನ್ನಮ್ಮ, ಕೊಚ್ಚುಪರಂಬಿಲ್, ಕೆರೆಕೋಡಿ ಮನೆ ಅವರ ಚಿಕಿತ್ಸೆಗೆ ರೂ.50,000 ಧನಸಹಾಯವನ್ನು ಜೂ.28ರಂದು ಅವರ ಸೊಸೆಯಾದ ಸೌಮ್ಯ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಗಸ್ಟೀನ್ ಟಿ.ಎ. ಮಾತನಾಡಿ, “ಸಂಕಷ್ಟದಲ್ಲಿರುವವರಿಗೆ ನೆರವಾಗುವುದು ನಮ್ಮ ಸಂಘಟನೆಯ ಪ್ರಮುಖ ಧ್ಯೇಯವಾಗಿದೆ. ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ. ಅವರು, “ಸದಸ್ಯರು ಹಾಗೂ ದಾನಿಗಳ ಉದಾರ ಸಹಕಾರದಿಂದ ಈ ನೆರವು ನೀಡಲು ಸಾಧ್ಯವಾಗಿದೆ. ಸಹಕರಿಸಿದ ಎಲ್ಲರಿಗೂ ಸಂಘದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು” ಎಂದು ಹೇಳಿದರು.

ಕಾರ್ಯದರ್ಶಿ ಶಿಜೋ ಜೋಸೆಫ್ ಅವರು, “ಕಾರುಣ್ಯ ಸ್ಪರ್ಶಂ ಯೋಜನೆಗೆ ಸ್ಪಂದಿಸಿ ನೆರವು ನೀಡಿದ ಎಲ್ಲಾ ದಾನಿಗಳು, ಸದಸ್ಯರು ಹಾಗೂ ಹಿತೈಷಿಗಳ ಸಹಕಾರದಿಂದ ಈ ಮಾನವೀಯ ಕಾರ್ಯ ಯಶಸ್ವಿಯಾಗಿದೆ. ಮುಂದೆಯೂ ಅಗತ್ಯವಿರುವವರಿಗೆ ನೆರವಾಗುವ ಸಮಾಜಮುಖಿ ಕಾರ್ಯಗಳನ್ನು ಸಂಘದ ವತಿಯಿಂದ ಮುಂದುವರಿಸಲಾಗುವುದು” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.

Related posts

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

Suddi Udaya

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya
error: Content is protected !!