23.8 C
ಪುತ್ತೂರು, ಬೆಳ್ತಂಗಡಿ
June 28, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜ, ಉಜಿರೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜೂನ್ 27ರಂದು ನಡೆಯಿತು.ಕು. ನಿಷ್ಠಾ ಜೈನ್ ಹಾಗೂ ಕು. ದೀಪ್ತಾ ಜೈನ್ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷೆ ಡಾ. ರಜತಾ ಪಿ. ಶೆಟ್ಟಿ ಅಧ್ಯಕ್ಷೀಯ ವರದಿ ಮಂಡಿಸಿದರು.

ನಿಕಟ ಪೂರ್ವ ಕಾರ್ಯದರ್ಶಿ ದಿವ್ಯಾ ಪ್ರಧಾನ್ ಹಾಗೂ ಖಜಾಂಚಿ ಸ್ಮಿತಾ ಪ್ರಶಾಂತ್ ಅವರು ಕಾರ್ಯ ಹಾಗೂ ಆರ್ಥಿಕ ವರದಿ ಸಲ್ಲಿಸಿದರು.ಮುಖ್ಯ ಅತಿಥಿ ಹಾಗೂ ಗೌರವ ಅಧ್ಯಕ್ಷೆ ಸೋನಿಯಾ ವರ್ಮಾ ಮಾತನಾಡಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ನಿಕಟ ಪೂರ್ವ ಪದಾಧಿಕಾರಿಗಳು ನೂತನ ಅಧ್ಯಕ್ಷೆ ಅಶ್ವಿನಿ ಪ್ರವೀಣ್ ಕುಮಾರ್, ಕಾರ್ಯದರ್ಶಿ ಸ್ಮೃತಿ ವಿನಯಚಂದ್ರ ಹಾಗೂ ಖಜಾಂಚಿ ಉಲ್ಲಾಸಿನಿ ಉದಯ ಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಕು. ಲಾಸ್ಯ ಅವರನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ 18 ನೂತನ ಸದಸ್ಯೆಯರು ಸಮಾಜಕ್ಕೆ ಸೇರ್ಪಡೆಗೊಂಡರು. ಮಹಿಳಾ ಸಮಾಜದ ಸದಸ್ಯೆ ಶಶಿಪ್ರಭಾ ಇವರು ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ಸ್ಮೃತಿ ವಿನಯಚಂದ್ರ ವಂದನಾರ್ಪಣೆ ಸಲ್ಲಿಸಿದರು.

Related posts

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

Suddi Udaya

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!