23.5 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಹೃದಯ ರೋಗಿಗೆ ಧನಸಹಾಯ ಹಸ್ತಾಂತರ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಕಾರುಣ್ಯ ಸ್ಪರ್ಶಂ ಯೋಜನೆಯಡಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಚಿನ್ನಮ್ಮ, ಕೊಚ್ಚುಪರಂಬಿಲ್, ಕೆರೆಕೋಡಿ ಮನೆ ಅವರ ಚಿಕಿತ್ಸೆಗೆ ರೂ.50,000 ಧನಸಹಾಯವನ್ನು ಜೂ.28ರಂದು ಅವರ ಸೊಸೆಯಾದ ಸೌಮ್ಯ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಗಸ್ಟೀನ್ ಟಿ.ಎ. ಮಾತನಾಡಿ, “ಸಂಕಷ್ಟದಲ್ಲಿರುವವರಿಗೆ ನೆರವಾಗುವುದು ನಮ್ಮ ಸಂಘಟನೆಯ ಪ್ರಮುಖ ಧ್ಯೇಯವಾಗಿದೆ. ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ. ಅವರು, “ಸದಸ್ಯರು ಹಾಗೂ ದಾನಿಗಳ ಉದಾರ ಸಹಕಾರದಿಂದ ಈ ನೆರವು ನೀಡಲು ಸಾಧ್ಯವಾಗಿದೆ. ಸಹಕರಿಸಿದ ಎಲ್ಲರಿಗೂ ಸಂಘದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು” ಎಂದು ಹೇಳಿದರು.

ಕಾರ್ಯದರ್ಶಿ ಶಿಜೋ ಜೋಸೆಫ್ ಅವರು, “ಕಾರುಣ್ಯ ಸ್ಪರ್ಶಂ ಯೋಜನೆಗೆ ಸ್ಪಂದಿಸಿ ನೆರವು ನೀಡಿದ ಎಲ್ಲಾ ದಾನಿಗಳು, ಸದಸ್ಯರು ಹಾಗೂ ಹಿತೈಷಿಗಳ ಸಹಕಾರದಿಂದ ಈ ಮಾನವೀಯ ಕಾರ್ಯ ಯಶಸ್ವಿಯಾಗಿದೆ. ಮುಂದೆಯೂ ಅಗತ್ಯವಿರುವವರಿಗೆ ನೆರವಾಗುವ ಸಮಾಜಮುಖಿ ಕಾರ್ಯಗಳನ್ನು ಸಂಘದ ವತಿಯಿಂದ ಮುಂದುವರಿಸಲಾಗುವುದು” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.

Related posts

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ರಾ. ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!