23.8 C
ಪುತ್ತೂರು, ಬೆಳ್ತಂಗಡಿ
June 28, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜ, ಉಜಿರೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜೂನ್ 27ರಂದು ನಡೆಯಿತು.ಕು. ನಿಷ್ಠಾ ಜೈನ್ ಹಾಗೂ ಕು. ದೀಪ್ತಾ ಜೈನ್ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷೆ ಡಾ. ರಜತಾ ಪಿ. ಶೆಟ್ಟಿ ಅಧ್ಯಕ್ಷೀಯ ವರದಿ ಮಂಡಿಸಿದರು.

ನಿಕಟ ಪೂರ್ವ ಕಾರ್ಯದರ್ಶಿ ದಿವ್ಯಾ ಪ್ರಧಾನ್ ಹಾಗೂ ಖಜಾಂಚಿ ಸ್ಮಿತಾ ಪ್ರಶಾಂತ್ ಅವರು ಕಾರ್ಯ ಹಾಗೂ ಆರ್ಥಿಕ ವರದಿ ಸಲ್ಲಿಸಿದರು.ಮುಖ್ಯ ಅತಿಥಿ ಹಾಗೂ ಗೌರವ ಅಧ್ಯಕ್ಷೆ ಸೋನಿಯಾ ವರ್ಮಾ ಮಾತನಾಡಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ನಿಕಟ ಪೂರ್ವ ಪದಾಧಿಕಾರಿಗಳು ನೂತನ ಅಧ್ಯಕ್ಷೆ ಅಶ್ವಿನಿ ಪ್ರವೀಣ್ ಕುಮಾರ್, ಕಾರ್ಯದರ್ಶಿ ಸ್ಮೃತಿ ವಿನಯಚಂದ್ರ ಹಾಗೂ ಖಜಾಂಚಿ ಉಲ್ಲಾಸಿನಿ ಉದಯ ಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಕು. ಲಾಸ್ಯ ಅವರನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ 18 ನೂತನ ಸದಸ್ಯೆಯರು ಸಮಾಜಕ್ಕೆ ಸೇರ್ಪಡೆಗೊಂಡರು. ಮಹಿಳಾ ಸಮಾಜದ ಸದಸ್ಯೆ ಶಶಿಪ್ರಭಾ ಇವರು ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ಸ್ಮೃತಿ ವಿನಯಚಂದ್ರ ವಂದನಾರ್ಪಣೆ ಸಲ್ಲಿಸಿದರು.

Related posts

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ

Suddi Udaya

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

Suddi Udaya

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

Suddi Udaya
error: Content is protected !!