25.8 C
ಪುತ್ತೂರು, ಬೆಳ್ತಂಗಡಿ
June 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಾಧವ ಎಮ್. ಕೆ ಅವರು ಜೂ.29 ರಂದು 2026-27ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು.

ಬಳಿಕ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, “ಸಾಧಿಸುವ ಇಚ್ಛಾಶಕ್ತಿ ನಮ್ಮಲ್ಲಿರಬೇಕು. ಮನಸ್ಸಿದ್ದರೆ ಮಾರ್ಗ” ಎಂದು ಹೇಳಿದರು.

ಶಾಲೆಯ ವಿವಿಧ ಸಂಘಗಳಾದ ಸಾಂಸ್ಕೃತಿಕ ಸಂಘ, ಭಿತ್ತಿ ಪತ್ರಿಕೆ ಸಂಘ, ಕಲಾ ಸಂಘ, ಹವ್ಯಾಸ ಸಂಘ, ಕ್ರೀಡಾ ಸಂಘ, ಇಂಟೆರಾಕ್ಟ್ ಸಂಘ, ಪರಿಸರ ಸಂಘ, ವಿಜ್ಞಾನ ಸಂಘ, ಸಾಹಿತ್ಯ ಸಂಘ, ಗಣಿತ ಸಂಘ ಇವುಗಳ ಉದ್ಘಾಟನೆ ವಿಶೇಷ ರೀತಿಯಲ್ಲಿ “ಆರೋಹಣ” ಎಂಬ ಶೀರ್ಷಿಕೆಯಡಿಯಲ್ಲಿ ನಡೆಯಿತು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿನಿಯರಾದ ಪೃಥ್ವಿ ಹಾಗೂ ಶ್ರೇಯ ನಿರೂಪಿಸಿ, ವಂಶಿ ವಂದಿಸಿದರು.

Related posts

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ವೇಣೂರು ನಿಟ್ಟಡೆಯ ಬಾಲಪ್ರತಿಭೆ ಯಶ್ವಿತ್ ಎಚ್.ಗೆ ಲಿಟಲ್ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ “ಮಹಿಳಾ ಯಕ್ಷಸಂಭ್ರಮ” ಉದ್ಘಾಟನೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya
error: Content is protected !!