22.9 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರ: ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ವಲಯದ ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದ ವತಿಯಿಂದ ಮಂಗಳೂರಿನ ಕರಾವಳಿ ಕಲಾ ತಂಡ ಕಲಾವಿದರಿಂದ ಸ್ವಚ್ಚತೆ , ನೀರಿನ ಮಿತ ಬಳಕೆ, ಮಕ್ಕಳ ಶಿಕ್ಷಣ, ಸ್ತನ ಕ್ಯಾನ್ಸರ್ ಹಾಗೂ ದುಶ್ಚಟದ ಬೀದಿ ನಾಟಕ ಪ್ರದರ್ಶನ ಹಾಗೂ ಮಾಹಿತಿ ಕಾರ್ಯಕ್ರಮ ಜೂ.28ರಂದು ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಗೌಡ ನೆರವೇರಿಸಿ, ಶುಭ ಹಾರೈಸಿದರು.

ಕರಾವಳಿ ಕಲಾ ತಂಡದ ಗಿರೀಶ್ ಅವರು ಮಾಹಿತಿ ನೀಡಿದರು. ಕಳಿಯ ಬಿ ಒಕ್ಕೂಟದ ಅಧ್ಯಕ್ಷೆ ಸುಭಾಷಿಣಿ ಗೌಡ ಮಾತನಾಡಿ, ಆರೋಗ್ಯ, ಸ್ವಚ್ಛತೆ ಹಾಗೂ ಮಹಿಳೆಯರ ಜಾಗೃತಿ ಕುರಿತು ಮಾತನಾಡಿದರು.

ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಯಶೋಧರ ಕೆ., ಕಳಿಯ ಎ. ಒಕ್ಕೂಟದ ಅಧ್ಯಕ್ಷೆ ಶಾಲಿನಿ ಸತೀಶ್, ಜ್ಞಾನ ವಿಕಾಸ ಸಂಯೋಜಕಿ ತಿಲೋತ್ತಮ, ವಲಯ ಮೇಲ್ವಿಚಾರಕ ಜಿ. ರವಿ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಸೌಮ್ಯ ಸ್ವಾಗತಿಸಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್ ವಂದಿಸಿದರು.

Related posts

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya
error: Content is protected !!