26.9 C
ಪುತ್ತೂರು, ಬೆಳ್ತಂಗಡಿ
June 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರ: ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ವಲಯದ ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದ ವತಿಯಿಂದ ಮಂಗಳೂರಿನ ಕರಾವಳಿ ಕಲಾ ತಂಡ ಕಲಾವಿದರಿಂದ ಸ್ವಚ್ಚತೆ , ನೀರಿನ ಮಿತ ಬಳಕೆ, ಮಕ್ಕಳ ಶಿಕ್ಷಣ, ಸ್ತನ ಕ್ಯಾನ್ಸರ್ ಹಾಗೂ ದುಶ್ಚಟದ ಬೀದಿ ನಾಟಕ ಪ್ರದರ್ಶನ ಹಾಗೂ ಮಾಹಿತಿ ಕಾರ್ಯಕ್ರಮ ಜೂ.28ರಂದು ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಗೌಡ ನೆರವೇರಿಸಿ, ಶುಭ ಹಾರೈಸಿದರು.

ಕರಾವಳಿ ಕಲಾ ತಂಡದ ಗಿರೀಶ್ ಅವರು ಮಾಹಿತಿ ನೀಡಿದರು. ಕಳಿಯ ಬಿ ಒಕ್ಕೂಟದ ಅಧ್ಯಕ್ಷೆ ಸುಭಾಷಿಣಿ ಗೌಡ ಮಾತನಾಡಿ, ಆರೋಗ್ಯ, ಸ್ವಚ್ಛತೆ ಹಾಗೂ ಮಹಿಳೆಯರ ಜಾಗೃತಿ ಕುರಿತು ಮಾತನಾಡಿದರು.

ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಯಶೋಧರ ಕೆ., ಕಳಿಯ ಎ. ಒಕ್ಕೂಟದ ಅಧ್ಯಕ್ಷೆ ಶಾಲಿನಿ ಸತೀಶ್, ಜ್ಞಾನ ವಿಕಾಸ ಸಂಯೋಜಕಿ ತಿಲೋತ್ತಮ, ವಲಯ ಮೇಲ್ವಿಚಾರಕ ಜಿ. ರವಿ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಸೌಮ್ಯ ಸ್ವಾಗತಿಸಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್ ವಂದಿಸಿದರು.

Related posts

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya

ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಜುಶ್ರೀ ನಿವೃತ್ತ ಮ್ಯಾನೇಜರ್ ಶೇಖರ್ ಅವರಿಗೆ ಸನ್ಮಾನ

Suddi Udaya

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya
error: Content is protected !!