27.5 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮಳೆಗೆ ಕೃತಕ ಕೆರೆಯಂತಾದ ಕಕ್ಕಿಂಜೆ–ನೆರಿಯ ರಸ್ತೆ

ಬೆಳ್ತಂಗಡಿ: ಒಂದೇ ದಿನ ಸುರಿದ ಭಾರೀ ಮಳೆಯಿಂದ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದ ಕಕ್ಕಿಂಜೆ–ನೆರಿಯ ರಸ್ತೆ ಸಂಪೂರ್ಣ ಜಲಾವೃತಗೊಂಡು ಕೆರೆಯಂತಾಗಿದೆ.

ರಸ್ತೆಯಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಮರ್ಪಕ ಚರಂಡಿ ವ್ಯವಸ್ಥೆಯ ಕೊರತೆಯಿಂದ ಮಳೆ ನೀರು ರಸ್ತೆಯಲ್ಲೇ ಸಂಗ್ರಹವಾಗುತ್ತಿದ್ದು, ಸಂಚಾರಕ್ಕೂ ಅಡಚಣೆ ಉಂಟಾಗಿದೆ.

ಸ್ಥಳೀಯರು ಹಲವು ಬಾರಿ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಳೆಗಾಲದಲ್ಲಿ ಇದೇ ಪರಿಸ್ಥಿತಿ ಮರುಕಳಿಸುತ್ತಿದ್ದು, ಕೂಡಲೇ ಸಮರ್ಪಕ ನೀರು ಹರಿವಿನ ವ್ಯವಸ್ಥೆ ಕಲ್ಪಿಸಿ ರಸ್ತೆ ಜಲಾವೃತ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಮಂಜು ಶ್ರೀ ಸೀನಿಯ‌ರ್ ಚೇಂಬರ್‌ ಬೆಳ್ತಂಗಡಿ ಘಟಕ: ಅಧ್ಯಕ್ಷರಾಗಿ ಜಾನ್ ಅರ್ವಿನ್ ಡಿ’ಸೋಜ, ಕಾರ್ಯದರ್ಶಿಯಾಗಿ ಶರತ್

Suddi Udaya

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ತ್ರೋಬಾಲ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya
error: Content is protected !!