24.7 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಯುವವಾಹಿನಿ ಸಂಚಲನಾ ಸಮಿತಿಯ ಪದಗ್ರಹಣ, ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ

ಮುಂಡಾಜೆ: ಯುವವಾಹಿನಿ ಸಂಚಲನಾ ಸಮಿತಿ ಮುಂಡಾಜೆ ಇದರ 6ನೇ ವರ್ಷದ ಪದಗ್ರಹಣ , ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮವು ಜೂ.28ರಂದು ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕೇಶವ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಯುವ ವಾಹಿನಿ ಬೆಳ್ತಂಗಡಿ ಘಟಕದ ನಿಯೋಜಿತ ಅಧ್ಯಕ್ಷೆ ಲೀಲಾವತಿ ವಸಂತ ಪೂಜಾರಿ ಪಣಕಜೆ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

2025-26ನೇ ಸಾಲಿನ ವರದಿ ವಾಚನವನ್ನು ಕಾರ್ಯದರ್ಶಿ ಜಿತಿಕ್ಷಾ ವಾಚಿಸಿದರು. 2026ನೇ ಸಾಲಿನ ನೂತನ ಪದಾಧಿಕಾರಿಗಳ ಸಮಿತಿಯನ್ನು ಅಧ್ಯಕ್ಷ ಕೇಶವ ಪೂಜಾರಿ ಶಾರದ ನಗರ ಹಾಗೂ ಕಾರ್ಯದರ್ಶಿ ಸಂತೋಷ್ ಪೂಜಾರಿ ಪಿಲತಡ್ಕ ಇವರಿಗೆ ಸಂಚಲನಾ ಸಮಿತಿಯ ಪುಸ್ತಕ ಹಸ್ತಾಂತರ ಮಾಡುವ ಮುಖೇನ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ 500ಕ್ಕಿಂತ ಅಧಿಕ ಅಂಕ ಗಳಿಸಿದ ಸ್ವಜಾತಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಅದೇ ರೀತಿ 1ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು.

ಸಮಾರಂಭದ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಆಯೋಜಿಸಲಾಗಿರುವ ಪದಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಸಮಿತಿಯ ಗೌರವಾಧ್ಯಕ್ಷ ಬಾಬು ಪೂಜಾರಿ ಕೂಳೂರು ಸಭೆಯನ್ನುದ್ದೇಶಿಸಿ ಪ್ರಾಸ್ತವಿಕ ನುಡಿಯನ್ನು ನುಡಿದರು. ತಂಡದ ಸಂಚಾಲಕ ಗಣೇಶ್ ಬಂಗೇರ ಕೂಳೂರು ಮಕ್ಕಳಿಗೆ ಶುಭನುಡಿ ನುಡಿದರು.

ಮುಖ್ಯ ಅತಿಥಿ ಕಿಶೋರ್ ಕುಮಾರ್ ಕುರುಡ್ಯ ಸಭೆಯನ್ನು ಉದ್ದೇಶಿಸಿ ಹಿತನುಡಿಗಳ ನುಡಿದರು. ಬೆಳ್ತಂಗಡಿ ಘಟಕದ ಅಧ್ಯಕ್ಷೆ ಲೀಲಾವತಿ ವಸಂತ ಪೂಜಾರಿ, ನಿಯೋಜಿತ ಕಾರ್ಯದರ್ಶಿ ಅಶ್ವಿನ್ ಹಾಗೂ ನಿಯೋಜಿತ ಕೋಶಾಧಿಕಾರಿ ಸುದೀಪ್ ಸಾಲ್ಯಾನ್ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಅಧ್ಯಕ್ಷ ಕೇಶವ ಪೂಜಾರಿ ಇವರು ಅಧ್ಯಕ್ಷೀಯ ನುಡಿಗಳನ್ನು ನುಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು ಸ್ವಜಾತಿ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಯಶೋಧರ ಪೂಜಾರಿ ಸ್ವಾಗತಿಸಿ, ಲೀಲಾವತಿ ವಂದಿಸಿದರು. ನಿಶ್ಮಿತಾ ನಿರೂಪಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya
error: Content is protected !!