ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು ರೂ.1ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ದೇವರಿಗೆ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ಪ್ರಯುಕ್ತ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ್ ಭಟ್ ಮಠ ಅವರ ಉಪಸ್ಥಿತಿಯಲ್ಲಿ ಜೂ.29ರಂದು ಜರಗಿತು.
ತಂತ್ರಿಗಳು ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ಸದಸ್ಯರಾದ ಶಾoಭವಿ ಪಿ ಬoಗೇರ ಬೆಳ್ತಂಗಡಿ, ಸತೀಶ್ ಬಂಗೇರ ಕುವೆಟ್ಟು, ಗೋಪಿನಾಥ್ ನಾಯಕ್ ಗುರುವಾಯನಕೆರೆ, ರಾಜು ಪಡoಗಡಿ, ಹರಿಪ್ರಸಾದ್ ಇರ್ವತ್ರಾಯ ತoಗೊಯಿ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಅನoದ ಶೆಟ್ಟಿ ವಾತ್ಸಲ್ಯ, ಗೋವಿಂದ ಭಟ್, ಪ್ರವೀಣ್ ಕುಮಾರ್ ಪಾಡ್ಯಾರುಬೀಡು, ವಿಠಲ ಶೆಟ್ಟಿ ಓಡೀಲು, ನಾರಾಯಣ ಶೆಟ್ಟಿ ಪುರಿಪಟ್ಟ, ಸಂಪತ್ ಕುಮಾರ್ ಜೈನ್ ಪಡಂಗಡಿ, ಪದ್ಮನಾಭ ಸಾಲಿಯಾನ್ ಮಾಲಾಡಿ, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಚಿದಾನಂದ ಇಡ್ಯ, ದಾಮೋದರ್ ಕುoದರ್ ಸಬರಬೈಲು, ಮದ್ದಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸಂಘಟಕ ಚಂದ್ರಹಾಸ ಕೇದೆ, ವೃಷಿಕೇಶ್ ಜೈನ್ ಪಡಂಗಡಿ, ವೃಷಭ ಆರಿಗ ಪರಾರಿಗುತ್ತು, ಭಕ್ತಾದಿಗಳು ಉಪಸ್ಥಿತರಿದ್ದರು.













