ಬೆಳ್ತಂಗಡಿ: ಕರ್ನಾಟಕ ಸರಕಾರದ ಆರೋಗ್ಯ ಇಲಾಖೆ ವತಿಯಿಂದ ಜೂನ್ 28ರಂದು ನಡೆದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ಬೆಳ್ತಂಗಡಿ ತಾಲೂಕು ವೈದ್ಯಧಿಕಾರಿ ಡಾ., ಸಂಜತ್ ರವರ ಮಾರ್ಗದರ್ಶನದಲ್ಲಿ ತಾಲೂಕಿನ ವಿವಿಧೆಡೆ ಸುಮಾರು 50 ಕ್ಕೂ ಅಧಿಕ ಬೂತ್ ಗಳಲ್ಲಿ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಮನ್ ಷ್ಯರ್ ಪ್ಯಾರ ಮೆಡಿಕಲ್ ವಿದ್ಯಾರ್ಥಿಗಳು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿದರು.
ಸಂಸ್ಥೆಯ ಅಧ್ಯಕ್ಷ ಸಯ್ಯಿದ್ ಉಮರ್ ಅಸ್ಸಖಾಫ್ ಮನ್ ಷ್ಯರ್ ತಂಗಳ್ ರವರು ಇಂತಹ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿ ಜೀವನದಲ್ಲೇ ಭಾಗಿಯಾಗುದರಿಂದ ಭವಿಷ್ಯ ದಲ್ಲಿ ಸಮಾಜದ ಬಗ್ಗೆ ಕಾಳಜಿ ಮೂಡಲು ಸಹಕಾರಿ ಯಾಗುವುದು ಎಂಬುದಾಗಿ ವಿದ್ಯಾರ್ಥಿಗಳ ಸೇವೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಸಂಸ್ಥೆಯ ಪ್ರಾಂಶುಪಾಲ ಹೈದರ್ ಮರ್ಧಾಳ ರವರು ಸೂಕ್ತ ರೀತಿಯಲ್ಲಿ ಪೋಲಿಯೊ ಅಭಿಯಾನದ ಬಗ್ಗೆ ತರಬೇತಿಯನ್ನು ನೀಡಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ ವಿವಿಧ ಬೂತ್ ಗಳಿಗೆ ನಿಯೋಜಿಸಿದರು , ಮುಂದಿನ ಎರಡು ದಿನದಲ್ಲಿ ನಡೆಯುವ ಮನೆ ಭೇಟಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಸೇವೆ ಲಭ್ಯ ಎಂಬುದಾಗಿ ಪೋಲಿಯೊ ಅಭಿಯಾನದ ಕನ್ವಿನರ್ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ರಶೀದ್ ಕುಪ್ಪೆಟ್ಟಿ ರವರು ಪ್ರಕಟಣೆಯಲ್ಲಿ ತಿಳಿಸಿದರು.













