ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಾಧವ ಎಮ್. ಕೆ ಅವರು ಜೂ.29 ರಂದು 2026-27ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು.
ಬಳಿಕ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, “ಸಾಧಿಸುವ ಇಚ್ಛಾಶಕ್ತಿ ನಮ್ಮಲ್ಲಿರಬೇಕು. ಮನಸ್ಸಿದ್ದರೆ ಮಾರ್ಗ” ಎಂದು ಹೇಳಿದರು.
ಶಾಲೆಯ ವಿವಿಧ ಸಂಘಗಳಾದ ಸಾಂಸ್ಕೃತಿಕ ಸಂಘ, ಭಿತ್ತಿ ಪತ್ರಿಕೆ ಸಂಘ, ಕಲಾ ಸಂಘ, ಹವ್ಯಾಸ ಸಂಘ, ಕ್ರೀಡಾ ಸಂಘ, ಇಂಟೆರಾಕ್ಟ್ ಸಂಘ, ಪರಿಸರ ಸಂಘ, ವಿಜ್ಞಾನ ಸಂಘ, ಸಾಹಿತ್ಯ ಸಂಘ, ಗಣಿತ ಸಂಘ ಇವುಗಳ ಉದ್ಘಾಟನೆ ವಿಶೇಷ ರೀತಿಯಲ್ಲಿ “ಆರೋಹಣ” ಎಂಬ ಶೀರ್ಷಿಕೆಯಡಿಯಲ್ಲಿ ನಡೆಯಿತು.
ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿನಿಯರಾದ ಪೃಥ್ವಿ ಹಾಗೂ ಶ್ರೇಯ ನಿರೂಪಿಸಿ, ವಂಶಿ ವಂದಿಸಿದರು.













