25.8 C
ಪುತ್ತೂರು, ಬೆಳ್ತಂಗಡಿ
June 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮಳೆಗೆ ಕೃತಕ ಕೆರೆಯಂತಾದ ಕಕ್ಕಿಂಜೆ–ನೆರಿಯ ರಸ್ತೆ

ಬೆಳ್ತಂಗಡಿ: ಒಂದೇ ದಿನ ಸುರಿದ ಭಾರೀ ಮಳೆಯಿಂದ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದ ಕಕ್ಕಿಂಜೆ–ನೆರಿಯ ರಸ್ತೆ ಸಂಪೂರ್ಣ ಜಲಾವೃತಗೊಂಡು ಕೆರೆಯಂತಾಗಿದೆ.

ರಸ್ತೆಯಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಮರ್ಪಕ ಚರಂಡಿ ವ್ಯವಸ್ಥೆಯ ಕೊರತೆಯಿಂದ ಮಳೆ ನೀರು ರಸ್ತೆಯಲ್ಲೇ ಸಂಗ್ರಹವಾಗುತ್ತಿದ್ದು, ಸಂಚಾರಕ್ಕೂ ಅಡಚಣೆ ಉಂಟಾಗಿದೆ.

ಸ್ಥಳೀಯರು ಹಲವು ಬಾರಿ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಳೆಗಾಲದಲ್ಲಿ ಇದೇ ಪರಿಸ್ಥಿತಿ ಮರುಕಳಿಸುತ್ತಿದ್ದು, ಕೂಡಲೇ ಸಮರ್ಪಕ ನೀರು ಹರಿವಿನ ವ್ಯವಸ್ಥೆ ಕಲ್ಪಿಸಿ ರಸ್ತೆ ಜಲಾವೃತ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಿಶಿಲ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ದೂರು ಅರ್ಜಿಯ ಮೇರೆಗೆ ಸ್ಥಳ ಪರಿಶೀಲಿಸಿದ ಶಾಸಕರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya
error: Content is protected !!