22.9 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರ: ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ವಲಯದ ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದ ವತಿಯಿಂದ ಮಂಗಳೂರಿನ ಕರಾವಳಿ ಕಲಾ ತಂಡ ಕಲಾವಿದರಿಂದ ಸ್ವಚ್ಚತೆ , ನೀರಿನ ಮಿತ ಬಳಕೆ, ಮಕ್ಕಳ ಶಿಕ್ಷಣ, ಸ್ತನ ಕ್ಯಾನ್ಸರ್ ಹಾಗೂ ದುಶ್ಚಟದ ಬೀದಿ ನಾಟಕ ಪ್ರದರ್ಶನ ಹಾಗೂ ಮಾಹಿತಿ ಕಾರ್ಯಕ್ರಮ ಜೂ.28ರಂದು ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಗೌಡ ನೆರವೇರಿಸಿ, ಶುಭ ಹಾರೈಸಿದರು.

ಕರಾವಳಿ ಕಲಾ ತಂಡದ ಗಿರೀಶ್ ಅವರು ಮಾಹಿತಿ ನೀಡಿದರು. ಕಳಿಯ ಬಿ ಒಕ್ಕೂಟದ ಅಧ್ಯಕ್ಷೆ ಸುಭಾಷಿಣಿ ಗೌಡ ಮಾತನಾಡಿ, ಆರೋಗ್ಯ, ಸ್ವಚ್ಛತೆ ಹಾಗೂ ಮಹಿಳೆಯರ ಜಾಗೃತಿ ಕುರಿತು ಮಾತನಾಡಿದರು.

ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಯಶೋಧರ ಕೆ., ಕಳಿಯ ಎ. ಒಕ್ಕೂಟದ ಅಧ್ಯಕ್ಷೆ ಶಾಲಿನಿ ಸತೀಶ್, ಜ್ಞಾನ ವಿಕಾಸ ಸಂಯೋಜಕಿ ತಿಲೋತ್ತಮ, ವಲಯ ಮೇಲ್ವಿಚಾರಕ ಜಿ. ರವಿ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಸೌಮ್ಯ ಸ್ವಾಗತಿಸಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್ ವಂದಿಸಿದರು.

Related posts

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!