July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಆರಂಭ

ಮಂಗಳೂರು : ಭಾರತದ ಚುನಾವಣಾ ಆಯೋಗವು ರಾಜ್ಯದಲ್ಲಿ ಇಂದಿನಿಂದ 1 ತಿಂಗಳ ಕಾಲ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮಾಡಲಿದೆ. ಈಗಾಗಲೇ ಮ್ಯಾಪಿಂಗ್ ಮುಕ್ತಾಯವಾಗಿದ್ದು, ಚುನಾವಣಾಧಿಕಾರಿಗಳು, ಬಿಎಲ್‌ಓಗಳು ಮನೆ ಮನೆಗೆ ಭೇಟಿ ಕೊಡಲಿದ್ದಾರೆ.

ಕರ್ನಾಟಕದಲ್ಲಿ  91.61% ಮ್ಯಾಪಿಂಗ್ ಆಗಿದ್ದು, 5,54,32,314 ಮತದಾರರ ಪೈಕಿ 5,07,79,810 ಮತದಾರರ ಮ್ಯಾಪಿಂಗ್ ನಡೆದಿದೆ. 46,52,504 ಮತದಾರರು ಮ್ಯಾಪಿಂಗ್ ಆಗಬೇಕಿದೆ. ಈ 5.55 ಕೋಟಿ ಮತದಾರರ ಪೈಕಿ ಅಸಲಿ ಯಾರು? ನಕಲಿ ಯಾರು? ಎನ್ನುವುದನ್ನು ಪರಿಶೀಲಿಸಲಾಗುತ್ತದೆ.

ನಕಲಿ, ಅನರ್ಹ ಮತದಾರರನ್ನು ಜರಡಿ ಹಿಡಿದು ಪಟ್ಟಿಯಿಂದ ಡಿಲೀಟ್ ಮಾಡಲಿದೆ. ಮತದಾರರು ಅರ್ಜಿಯನ್ನ ತುಂಬಿ ಅರ್ಜಿಗೆ ಸಹಿ ಮಾಡಿ ಕೆಲವು ದಾಖಲೆಗಳನ್ನು ಸಲ್ಲಿಕೆ ಮಾಡಬೇಕಿದೆ. ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಹೆಸರು ಸೇರ್ಪಡೆ ಮೃತಪಟ್ಟವರು, ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಿದ್ದಾರೆ.

ಬಿಎಲ್‌ಓಗಳು ಮನೆಗೆ ಭೇಟಿ ನೀಡಿ ಎಸ್‌ಐಆರ್ ಅರ್ಜಿ ನೀಡಲಿದ್ದಾರೆ. ಎಸ್‌ಐಆರ್ ಅರ್ಜಿಗೆ ಮಾಹಿತಿ ನೀಡಿ ಮತದಾರರು ಸಹಿ ಮಾಡಬೇಕು. ಎಸ್‌ಐಆರ್‌ನಲ್ಲಿ ಭಾಗಿಯಾಗಿ ಮಾಹಿತಿ ನೀಡಿದರೆ ಮಾತ್ರ ಮತದಾನದ ಹಕ್ಕು, ಇಲ್ಲದೇ ಹೋದರೆ ಮತದಾನದಿಂದ ವಂಚಿತರಾಗುವ ಸಾಧ್ಯತೆ ಇದೆ. ಅಕ್ಟೋಬರ್ 7, 2026ಕ್ಕೆ 18 ತುಂಬುವ ಯುವ ಮತದಾರರು ಅರ್ಜಿ ಹಾಕಬಹುದಾಗಿದೆ. ರಾಜ್ಯ ಚುನಾವಣಾ ಆಯೋಗ, ಜಿಬಿಎ ಹಾಗೂ ಜಿಲ್ಲಾಡಳಿತಗಳು ಸಕಲ ಸಿದ್ಧತೆ ಮಾಡಿಕೊಂಡಿವೆ.

ಮತದಾರರು ಯಾವ ದಾಖಲೆ ಇಟ್ಟುಕೊಳ್ಳಬೇಕು?
1. ಕುಟುಂಬದವರ ಗುರುತಿನ ಚೀಟಿ
2. ವೋಟರ್ ಐಡಿ
3. ಆಧಾರ್ ಕಾರ್ಡ್
4. ವಿಳಾಸ ದೃಢಿಕರಣ ಪತ್ರ
5. ಪಾಸ್‌ಪೋರ್ಟ್ ಸೈಜ್ ಫೋಟೋ

Related posts

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

Suddi Udaya

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

Suddi Udaya

ಉಜಿರೆ ಗ್ರಾ. ಪಂ. ವಾರ್ಡ್ 4ರ ಉಪಚುನಾವಣೆ: ಅನಿಲ್ ಪ್ರಕಾಶ್ ಡಿ’ ಸೋಜ ಗೆಲುವು

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಪರ ಪ್ರತಿಬಂಧಕಾದೇಶ ಜಾರಿಗೊಳಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಸೂಚನೆ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya
error: Content is protected !!