27.5 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ ರಬ್ಬರ್ ಸೊಸೈಟಿ ಮಹಾಸಭೆ: ರೂ. 24 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 9 ಡಿವಿಡೆಂಟ್

ಉಜಿರೆ: ಸದಸ್ಯರ ಸೇವೆಯೇ ಜೀವಾಳ ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸಂಘವು ವರದಿ ವರ್ಷದಲ್ಲಿ 24 ಲಕ್ಷ ರೂ.ಗಿಂತ ಅಧಿಕ ಲಾಭಗಳಿಸಿದ್ದು,ಸದಸ್ಯರಿಗೆ ಶೇ.9 ಡಿವಿಡೆಂಟ್ ನೀಡಲು ನಿರ್ಣಯಿಸಿದೆ ಎಂದು ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ.ಭಿಡೆ ಹೇಳಿದರು.

ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಜೂ.30ರಂದು ಜರಗಿದ ಸಂಘದ 41ನೇ ವರ್ಷದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಬ್ಬರ್ ತೋಟಗಳನ್ನು ಹಲವಾರು ಬೆಳೆಗಾರರು ಲೀಸ್ ಗೆ ಕೊಟ್ಟಿದ್ದು,ಅಲ್ಲಿ ರಬ್ಬರ್ ಮರಗಳನ್ನು ಒಟ್ಟಾರೆಯಾಗಿ ಟ್ಯಾಪಿಂಗ್ ಮಾಡಿದ್ದು ಅವುಗಳನ್ನು ಕಡಿಯುವ ಸ್ಥಿತಿ ಉಂಟಾಗಿದೆ. ರಬ್ಬರ್ ಹೊಸ ತೋಟ ನಿರ್ಮಾಣದಲ್ಲೂ ಕೃಷಿಕರ ಆಸಕ್ತಿ ಕಡಿಮೆಯಾಗಿದ್ದು, ಮುಂದಿನ ಕೆಲವು ವರ್ಷ ಸಾಕಷ್ಟು ಸವಾಲು ಎದುರಿಸಬೇಕಾಗಿದೆ. ಸದಸ್ಯರು ಸಂಘಕ್ಕೆ ಅಗತ್ಯ ಸಹಕಾರ ನೀಡುವುದು ಅಗತ್ಯವಾಗಿದೆ ಎಂದರು.

3952 ಸದಸ್ಯರನ್ನು ಹೊಂದಿರುವ ಸಂಘವು 1.34 ಕೋಟಿ ರೂ.ಗಿಂತ ಪಾಲು ಭಂಡವಾಳ ಹೊಂದಿದೆ. ಸಂಘದಲ್ಲಿ 21 ಕೋಟಿ ರೂ.ಗಿಂತ ಅಧಿಕ ಠೇವಣಿಗಳಿವೆ. 285.60ಕೋಟಿ ರೂ.ಮಾರಾಟ ವ್ಯವಹಾರ ನಡೆಸಲಾಗಿದೆ. ಸಂಘವು ತಾಲೂಕು, ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಒಟ್ಟು 33 ಖರೀದಿ ಶಾಖೆಗಳನ್ನು ಹೊಂದಿದೆ. ಪ್ರಸಕ್ತ ವರ್ಷದಲ್ಲಿ14,844 ಟನ್ ರಬ್ಬರ್ ಖರೀದಿಸಲಾಗಿದ್ದು ಗ್ರಾಹಕರಿಗೆ ಕಿಲೋವೊಂದರ ಸರಾಸರಿ 188.93ರೂ. ಧಾರಣೆ ಸಿಕ್ಕಿದೆ. ರಬ್ಬರ್ ಹಾಲು ಖರೀದಿಯಲ್ಲಿ 3.90 ಕೋಟಿ ರೂ.ವ್ಯವಹಾರ ನಡೆದಿದೆ ಎಂದು ಹೇಳಿದರು.

ಸದಸ್ಯರಿಂದ ಖರೀದಿಸಿದ ರಬ್ಬರನ್ನು ದೇಶಾದ್ಯಂತ ಮಾರಾಟ ಮಾಡಲಾಗಿದ್ದು ಸದಸ್ಯರ ಉತ್ಪನ್ನಗಳಿಗೆ ಉತ್ತಮ ಧಾರಣೆ ಸಿಗುವಂತೆ ಸಂಘವು ನಿರಂತರ ಪ್ರಯತ್ನದಲ್ಲಿದೆ. ಸುಮಾರು 150ಕ್ಕಿಂತಲೂ ಮೇಲ್ಪಟ್ಟ ಉತ್ಪಾದಕರೊಂದಿಗೆ ನೇರ ವ್ಯವಹಾರ ನಡೆಸಲಾಗುತ್ತಿದೆ ಭಾರತದ ಹೆಸರಾಂತ ಟಯರ್ ಕಂಪನಿಗಳೊಂದಿಗೆ ವ್ಯವಹಾರ ಮಾಡಲಾಗುತ್ತಿದೆ ಎಂದರು.


ಮುಂದಿನ ಯೋಜನೆಗಳು: ಸಂಘವು ನಡೆಸುತ್ತಿರುವ ಎಲ್ಲಾ ಖರೀದಿ ಕೇಂದ್ರಗಳನ್ನು ಕಂಪ್ಯೂಟರಿಕರಣಗೊಳಿಸಿ ಆನ್ಲೈನ್ ಮಾಡುವುದು. ಸಂಘದ ವ್ಯವಹಾರ ವಿಸ್ತರಿಸುವ ನಿಟ್ಟಿನಲ್ಲಿ ತಾಲೂಕಿನ ಒಳಗೆ ಹಾಗೂ ಹೊರಗಡೆ ಅಗತ್ಯವಿದ್ದಲ್ಲಿ ಸೇವಾ ಕೇಂದ್ರಗಳನ್ನು ತೆರೆಯುವುದು, ಸುಧಾರಿತ ಕೃಷಿ ಕ್ರಮವನ್ನು ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ತಜ್ಞರಿಂದ ರೈತರ ತೋಟದಲ್ಲಿ ಪ್ರಾತ್ಯಕ್ಷಿತೆಗಳನ್ನು ಏರ್ಪಡಿಸುವುದು, ಸುಸಜ್ಜಿತ ಗೋದಾಮು ನಿರ್ಮಾಣ, ಖರೀದಿ ಕೇಂದ್ರಗಳಿಗೆ ಸ್ವಂತ ನಿವೇಶನ ಖರೀದಿ, ರಬ್ಬರು ಬೆಳೆಗಾರರ ಸಂಘಟನೆಯನ್ನು ಬಲಪಡಿಸುವುದು, ರಬ್ಬರು ಒದಗಿಸುವ ಸದಸ್ಯರಿಗೆ ರಿಯಾಯಿತಿ ದರದಲ್ಲಿ ರಬ್ಬರ್ ಕೃಷಿ ವಸ್ತುಗಳನ್ನು ಒದಗಿಸುವುದು ಇತ್ಯಾದಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.


ನಿರ್ದೇಶಕ ಬಾಲಕೃಷ್ಣ ಗೌಡ ಸ್ವಾಗತಿಸಿದರು. ಎಚ್.ಪದ್ಮ ಗೌಡ ವಂದಿಸಿದರು. ಸಿಇಒ ರಾಜು ಶೆಟ್ಟಿ ವರದಿ ವಾಚಿಸಿದರು.
ಉಪಾಧ್ಯಕ್ಷ ಅನಂತ ಭಟ್ ಎಂ., ನಿರ್ದೇಶಕರಾದ ಜಯಶ್ರೀ ಡಿ.ಎಂ., ಆರ್.ಸುಭಾಷಿಣಿ, ಬೈರಪ್ಪ,ರಾಮ ನಾಯ್ಕ, ಸೋಮನಾಥ ಬಂಗೇರ, ಗ್ರೇಸಿಯನ್ ವೇಗಸ್, ಪದ್ಮಗೌಡ ಎಚ್.,ಕೆ.ಜೆ.ಅಗಸ್ಟೀನ್, ತಿಮ್ಮಪ್ಪ ಗೌಡ, ಭರತ್ ಕುಮಾರ್, ಶಾಜಿ ಪಿ.ಎ., ಶಶಿಧರ ಡೋಂಗ್ರೆ, ವಿಶೇಷ ಆಹ್ವಾನಿತರಾದ ಅಬ್ರಾಹಾಂ ಬಿ.ಎಸ್., ಹರೀಶ್ ರಾವ್ ಉಪಸ್ಥಿತರಿದ್ದರು. ನಿಯೋಜಿತ ಸಿಇಒ ಹರಿಪ್ರಸಾದ್ ಹಾಗೂ ಸಿಬ್ಬಂದಿ ಸಹಕರಿಸಿದರು. ನಿದೇ೯ಶಕರಾದ ಪದ್ಮ ಗೌಡ ಹೆಚ್. ವಂದಿಸಿದರು.

Related posts

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!