27.5 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ: ಡಾಕ್ಯೂಮೆಂಟ್ ರೈಟರ್‌ಗೆ ಜೀವ ಬೆದರಿಕೆ : ಪ್ರಕರಣ ದಾಖಲು

ಬೆಳ್ತಂಗಡಿ: ಭೂ ದಾಖಲೆಗಳನ್ನು ದಾಖಲೀಕರಿಸುವ ವೇಳೆ ಪಕ್ಕದ ಜಮೀನನ್ನು ಸೇರಿಸಲಾಗಿದೆ ಎಂದು ಆರೋಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಲಾಗಿದೆ ಎಂದು ಡಾಕ್ಯೂಮೆಂಟ್ ರೈಟರ್ ರೋರ್ವರು ನೀಡಿದ ದೂರಿನಂತೆ ಕರಾಯ ನಿವಾಸಿ ಚರಣ್ ಎಂಬವರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಡಾಕ್ಯೂಮೆಂಟ್ ರೈಟರ್, ಕರಾಯ ಗ್ರಾಮದ ನಿವಾಸಿಯಾಗಿರುವ ಕೆ.ಎಸ್.ಅಬ್ದುಲ್ಲಾ ಎಂಬವರು ದೂರು ನೀಡಿದ್ದು, ‘ಜೂ.25ರಂದು ಸಂಜೆ 6 ಗಂಟೆ ವೇಳೆಗೆ ಕರಾಯದ ಪೆಟ್ರೋಲ್ ಪಂಪಿನಲ್ಲಿ ತನ್ನ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ತುಂಬಿಸಿ ಹೊರಡುವ ಸಮಯದಲ್ಲಿ ಇನ್ನೋವಾ ಕಾರಿನಲ್ಲಿ ಬಂದ ಕರಾಯ ನಿವಾಸಿ ಚರಣ್ ಎಂಬಾತ ದ್ವಿಚಕ್ರ ವಾಹನಕ್ಕೆ ಕಾರನ್ನು ಅಡ್ಡವಾಗಿರಿಸಿ ಸಂಚಾರಕ್ಕೆ ತಡೆಯೊಡ್ಡಿರುವುದಲ್ಲದೆ ಅವಾಚ್ಯ ಪದಗಳಿಂದ ತನಗೆ ನಿಂದಿಸಿರುತ್ತಾರೆ’ ಎಂದು ಆರೋಪಿಸಿದ್ದಾರೆ.

ಕರಾಯ ಗ್ರಾಮದ ವ್ಯಕ್ತಿಯೋರ್ವರ ಭೂ ದಾಖಲೆಗಳ ದಾಖಲೀಕರಣದ ವೇಳೆ ಆರೋಪಿತರ ಭೂಮಿಯೂ ಸೇರಿರುವುದಕ್ಕೆ ನಾನೇ ಕಾರಣವೆಂದು ಭಾವಿಸಿ ನನ್ನ ವಿರುದ್ಧ ಈ ಕೃತ್ಯಗೈದಿರುತ್ತಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

Suddi Udaya

ಪೆರಿಂಜೆ : ರಸಿಕ ಕಂಬಳಿ ನಿಧನ

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya
error: Content is protected !!