August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ: ಡಾಕ್ಯೂಮೆಂಟ್ ರೈಟರ್‌ಗೆ ಜೀವ ಬೆದರಿಕೆ : ಪ್ರಕರಣ ದಾಖಲು

ಬೆಳ್ತಂಗಡಿ: ಭೂ ದಾಖಲೆಗಳನ್ನು ದಾಖಲೀಕರಿಸುವ ವೇಳೆ ಪಕ್ಕದ ಜಮೀನನ್ನು ಸೇರಿಸಲಾಗಿದೆ ಎಂದು ಆರೋಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಲಾಗಿದೆ ಎಂದು ಡಾಕ್ಯೂಮೆಂಟ್ ರೈಟರ್ ರೋರ್ವರು ನೀಡಿದ ದೂರಿನಂತೆ ಕರಾಯ ನಿವಾಸಿ ಚರಣ್ ಎಂಬವರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಡಾಕ್ಯೂಮೆಂಟ್ ರೈಟರ್, ಕರಾಯ ಗ್ರಾಮದ ನಿವಾಸಿಯಾಗಿರುವ ಕೆ.ಎಸ್.ಅಬ್ದುಲ್ಲಾ ಎಂಬವರು ದೂರು ನೀಡಿದ್ದು, ‘ಜೂ.25ರಂದು ಸಂಜೆ 6 ಗಂಟೆ ವೇಳೆಗೆ ಕರಾಯದ ಪೆಟ್ರೋಲ್ ಪಂಪಿನಲ್ಲಿ ತನ್ನ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ತುಂಬಿಸಿ ಹೊರಡುವ ಸಮಯದಲ್ಲಿ ಇನ್ನೋವಾ ಕಾರಿನಲ್ಲಿ ಬಂದ ಕರಾಯ ನಿವಾಸಿ ಚರಣ್ ಎಂಬಾತ ದ್ವಿಚಕ್ರ ವಾಹನಕ್ಕೆ ಕಾರನ್ನು ಅಡ್ಡವಾಗಿರಿಸಿ ಸಂಚಾರಕ್ಕೆ ತಡೆಯೊಡ್ಡಿರುವುದಲ್ಲದೆ ಅವಾಚ್ಯ ಪದಗಳಿಂದ ತನಗೆ ನಿಂದಿಸಿರುತ್ತಾರೆ’ ಎಂದು ಆರೋಪಿಸಿದ್ದಾರೆ.

ಕರಾಯ ಗ್ರಾಮದ ವ್ಯಕ್ತಿಯೋರ್ವರ ಭೂ ದಾಖಲೆಗಳ ದಾಖಲೀಕರಣದ ವೇಳೆ ಆರೋಪಿತರ ಭೂಮಿಯೂ ಸೇರಿರುವುದಕ್ಕೆ ನಾನೇ ಕಾರಣವೆಂದು ಭಾವಿಸಿ ನನ್ನ ವಿರುದ್ಧ ಈ ಕೃತ್ಯಗೈದಿರುತ್ತಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ನೆರಿಯ: ಬೈಕ್ – ಸ್ಕೂಟರ್ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya

ಪಡುಮಲೆ ದೇಯಿ ಬೈದೆತಿ ಮೂಲಸ್ಥಾನದಲ್ಲಿ ಪ್ರಶ್ನಾ ಚಿಂತನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya
error: Content is protected !!