27.5 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 10ನೇ ತಿರುವಿನ ಸಮೀಪ ಮರವೊಂದು ರಸ್ತೆಗೆ ಉರುಳಿ ಸುಮಾರು ಒಂದು ತಾಸು ಕಾಲ ಸಂಚಾರ ವ್ಯತ್ಯಯ, ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೋಮವಾರ ರಾತ್ರಿ ನಡೆದಿದೆ

.ಸಂಜೆ 7 ಗಂಟೆಗೆ ಸುಮಾರಿಗೆ ಮರ ಉರುಳಿ ಬಿದ್ದಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿ ಇಕ್ಕೆಲಗಳಲ್ಲೂ ಒಂದೂವರೆ ತಾಸಿನಷ್ಟು ಕಾಲ ವಾಹನಗಳು ಸಾಲುಗಟ್ಟಿ ನಿಂತವು. ಜೋರಾಗಿ ಸುರಿಯುತ್ತಿದ್ದ ಮಳೆ, ಮಂಜುಕವಿದ ವಾತಾವರಣ, ಬೆಳಕಿನ ಅಭಾವ ತ್ವರಿತವಾಗಿ ಮರ ತೆರವುಗೊಳಿಸಲು ಅಡ್ಡಿಯಾಯಿತು.

ಉಪವಲಯ ಅರಣ್ಯಾಧಿಕಾರಿ ರಂಜಿತ್, ಸಿಬ್ಬಂದಿಗಳಾದ ಗೋಪಾಲ, ಮನೋಹರ್, ಇಸ್ಮಾಯಿಲ್, ವಾಹನ ಸವಾರರು ಹಾಗೂ ಮತ್ತಿತರರು ಮರ ತೆರವಿಗೆ ಸಹಕರಿಸಿದರು. ಸೋಮವಾರ ಬೆಳಗಿನ ಜಾವ ಎರಡನೇ ತಿರುವಿನ ಬಳಿ ಮರ ರಸ್ತೆಗೆ ಬಾಗಿ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಘಾಟಿ ಪ್ರದೇಶದಲ್ಲಿ ನೂರಾರು ಅಪಾಯಕಾರಿ ಮರಗಳಿದ್ದು, ಜೋರಾದ ಮಳೆ ವೇಳೆ ರಸ್ತೆಗೆ ಉರುಳಿ ಸಂಚಾರಕ್ಕೆ ಸಮಸ್ತೆಯಾಗುತ್ತಿರುವುದು ಸರ್ವೇಸಾಮಾನ್ಯವಾಗಿದೆ.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷದ್ರುವ ದಶಮಾನೋತ್ಸವಕ್ಕೆ ರೂ. 10 ಲಕ್ಷ ದೇಣಿಗೆ

Suddi Udaya
error: Content is protected !!