ಬೆಳ್ತಂಗಡಿ: ಜಿಲ್ಲೆಯ ಖ್ಯಾತ ನಾಟಕ ಕಲಾವಿದ ಹಾಗೂ ನಿರೂಪಕರಾದ ಪ್ರಸನ್ನ ಶೆಟ್ಟಿ, ಬೈಲೂರು ರವರು 100ಕ್ಕೂ ಅಧಿಕ ವೇದಿಕೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ನಿರ್ದೇಶಕರಾದ ವಂ.ಫಾ| ವಿನೋದ್ ಮಸ್ಕರೇನ್ಹಸ್ ರವರನ್ನು ದಯಾ ವಿಶೇಷ ಶಾಲೆಗೆ ಭೇಟಿ ನೀಡಿ, ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜನಮನ ಗೆದ್ದಿರುವ ಫಾ. ವಿನೋದ್ ಮಸ್ಕರೇನ್ಹಸ್ ರವರ ಸಾಧನೆಯನ್ನು ಗುರುತಿಸಿ ಹಾಗೂ ಚೈತನ್ಯ ಕಲಾವಿದರು ಬೈಲೂರು ಅವರ ತಂಡವು ಈ ವರ್ಷ ರಾಘು ಮಾಸ್ಟ್ರು ನಾಟಕವು ಅತಿ ಕಡಿಮೆ ಸಮಯದಲ್ಲಿ ನೂರಕ್ಕಿಂತ ಹೆಚ್ಚು ವೇದಿಕೆಯನ್ನು ಯಶಸ್ವಿಯಾಗಿ ಪಡೆದುಕೊಂಡಿರುವ ಸಂತೋಷದ ಹಿನ್ನೆಲೆಯಲ್ಲಿ ದಯಾ ವಿಶೇಷ ಶಾಲೆಯ ನಿರ್ದೇಶಕರಿಗೆ ಈ ಗೌರವವನ್ನು ಪ್ರಧಾನ ಮಾಡಲಾಗಿದೆ.ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು, ಕಲಾವಿದರು, ಅಭಿಮಾನಿಗಳು, ದಯಾ ವಿಶೇಷ ಶಾಲೆಯ ಸಿಬ್ಬಂದಿಗಳು ಹಾಗೂ ವಿಶೇಷ ಚೇತನ ಮಕ್ಕಳು ಉಪಸ್ಥಿತರಿದ್ದು, ಪ್ರಸನ್ನ ಶೆಟ್ಟಿ ಅವರ ಮುಂದಿನ ಕಲಾ ಪಯಣ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.













