August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ರಾಘು ಮಾಸ್ಟರ್’ ನಾಟಕ 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನ: ಶಿಶಿಲ ಶಾಲೆಯಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ತಂಡದವರಿಂದ ಸಂಭ್ರಮಾಚರಣೆ

ಶಿಶಿಲ: 100ಕ್ಕೂ ಹೆಚ್ಚು ಯಶಸ್ವಿ ನಾಟಕ ಪ್ರದರ್ಶನಗಳನ್ನು ನೀಡಿದ ಸಂಭ್ರಮದ ಅಂಗವಾಗಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ಅವರ ತಂಡದವರು ಇಂದು ಶಿಶಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಸಂಭ್ರಮವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಸನ್ನ ಶೆಟ್ಟಿ ಅವರು, “ನಮ್ಮ ‘ರಾಘು ಮಾಸ್ಟರ್’ ನಾಟಕವು 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನಗಳನ್ನು ನೀಡಲು ಅನೇಕ ಸಂಘ-ಸಂಸ್ಥೆಗಳು ಹಾಗೂ ಶಾಲೆಗಳ ಸಹಕಾರ ಕಾರಣವಾಗಿದೆ. ಅವುಗಳಲ್ಲಿ ಶಿಶಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೂ ಒಂದು. ಆದ್ದರಿಂದ ಈ ಸಂತಸದ ಕ್ಷಣವನ್ನು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೊಂದಿಗೆ ಹಂಚಿಕೊಳ್ಳಲು ನಾವು ಇಲ್ಲಿಗೆ ಬಂದಿದ್ದೇವೆ” ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋಹನ್ ಗೌಡ, ಮುಖ್ಯಶಿಕ್ಷಕಿ ಶ್ರೀಮತಿ ಸರಸ್ವತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ ಶಿಶಿಲ, ಸದಸ್ಯರಾದ ಭುವನ್ ಕುಮಾರ್, ಮನೋಜ್, ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪ್ರಸನ್ನ ಶೆಟ್ಟಿ ಅವರ ತಂಡದ ಸದಸ್ಯರು ಉಪಸ್ಥಿತರಿದ್ದರು.ಸಂಭ್ರಮದ ಅಂಗವಾಗಿ ಎಲ್ಲರಿಗೂ ಸಿಹಿ ತಿಂಡಿ ವಿತರಿಸಿದರು.

Related posts

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಿಯುಸಿ ಫಲಿತಾಂಶ: ಸಂತ ತೆರೇಸಾ ಪ.ಪೂ. ಕಾಲೇಜಿನ ನಿಶಾ ನಜ್ನಿನ್ ಗೆ 574 ಅಂಕ

Suddi Udaya

ಉಜಿರೆ: ರಸ್ತೆಯ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

Suddi Udaya

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

Suddi Udaya

ಬಳ್ಳಮಂಜ ಬ್ರಹ್ಮಕಲಶ: ಈಶ್ವರ ದೇವರ ಲಿಂಗ ಪುನ:ಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ-ಗರುಡ ಪ್ರದಕ್ಷಿಣೆ

Suddi Udaya
error: Content is protected !!