23.8 C
ಪುತ್ತೂರು, ಬೆಳ್ತಂಗಡಿ
July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ರಾಘು ಮಾಸ್ಟರ್’ ನಾಟಕ 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನ: ಶಿಶಿಲ ಶಾಲೆಯಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ತಂಡದವರಿಂದ ಸಂಭ್ರಮಾಚರಣೆ

ಶಿಶಿಲ: 100ಕ್ಕೂ ಹೆಚ್ಚು ಯಶಸ್ವಿ ನಾಟಕ ಪ್ರದರ್ಶನಗಳನ್ನು ನೀಡಿದ ಸಂಭ್ರಮದ ಅಂಗವಾಗಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ಅವರ ತಂಡದವರು ಇಂದು ಶಿಶಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಸಂಭ್ರಮವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಸನ್ನ ಶೆಟ್ಟಿ ಅವರು, “ನಮ್ಮ ‘ರಾಘು ಮಾಸ್ಟರ್’ ನಾಟಕವು 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನಗಳನ್ನು ನೀಡಲು ಅನೇಕ ಸಂಘ-ಸಂಸ್ಥೆಗಳು ಹಾಗೂ ಶಾಲೆಗಳ ಸಹಕಾರ ಕಾರಣವಾಗಿದೆ. ಅವುಗಳಲ್ಲಿ ಶಿಶಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೂ ಒಂದು. ಆದ್ದರಿಂದ ಈ ಸಂತಸದ ಕ್ಷಣವನ್ನು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೊಂದಿಗೆ ಹಂಚಿಕೊಳ್ಳಲು ನಾವು ಇಲ್ಲಿಗೆ ಬಂದಿದ್ದೇವೆ” ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋಹನ್ ಗೌಡ, ಮುಖ್ಯಶಿಕ್ಷಕಿ ಶ್ರೀಮತಿ ಸರಸ್ವತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ ಶಿಶಿಲ, ಸದಸ್ಯರಾದ ಭುವನ್ ಕುಮಾರ್, ಮನೋಜ್, ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪ್ರಸನ್ನ ಶೆಟ್ಟಿ ಅವರ ತಂಡದ ಸದಸ್ಯರು ಉಪಸ್ಥಿತರಿದ್ದರು.ಸಂಭ್ರಮದ ಅಂಗವಾಗಿ ಎಲ್ಲರಿಗೂ ಸಿಹಿ ತಿಂಡಿ ವಿತರಿಸಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

Suddi Udaya

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

Suddi Udaya
error: Content is protected !!