27.5 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ಬ್ಯಾನರ್‌ನಲ್ಲಿ ಎಡವಟ್ಟು

ಬೆಳ್ತಂಗಡಿ: ತಾಲೂಕಿನ ಗ್ರಾಮಗಳ ಸ್ಥಳೀಯ ಸ್ಥಳಗಳ ಸರಿಯಾದ ಮಾಹಿತಿ ಇಲ್ಲದಿದ್ದರೆ ಏನೆಲ್ಲಾ ಎಡವಟ್ಟು ಆಗುತ್ತದೆ ಎಂಬುವುದಕ್ಕೆ ಲೋಕೋಪಯೋಗಿ ಇಲಾಖೆಯವರು ಗುರಿಪಳ್ಳ ಅಂಬಡಬೆಟ್ಟು ಸೇತುವೆ ಬಳಿ ಅಳವಡಿಸಿದ ಬ್ಯಾನರ್ ಸಾಕ್ಷಿ.

ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ ಅಂಬಡಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿ ಸಂಬಂಧ ವಾಹನ ಸಂಚಾರವನ್ನು ನಿರ್ಬಂಧಿಸಿ, ಮಾರ್ಗ, ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಅವರ ಆದೇಶದ ಮೇರೆಗೆ ದಿನಾಂಕ 09.06.2026 ರನ್ವಯ ಬೆಳ್ತಂಗಡಿ ಉಪ ವಿಭಾಗದ ಲೋಕೋಪಯೋಗಿ ಇಲಾಖೆ ಅಳವಡಿಸಿದ ಬ್ಯಾನರ್ ನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿರದ ಊರುಗಳ ಹೆಸರನ್ನು ಮುದ್ರಿಸಿರುವುದು ಕಂಡು ಬಂದಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಬ್ಯಾನರ್ ನಲ್ಲಿ ಏನಿದೆ?;-
1.ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ದ್ವಾರದಿಂದ-ಸೂರ್ಯ ದೇವಸ್ಥಾನ ಮಾರ್ಗವಾಗಿ – ಕೇಳ್ತಜೆ ಮುಖಾಂತರ ಸಂಚರಿಸುವುದು.

2. ಬೆಳ್ತಂಗಡಿ- ಕಿಲ್ಲೂರು-ಕಾಜೂರು ರಸ್ತೆಯ ಇಂದಬೆಟ್ಟು ಗ್ರಾಮದಿಂದ ನೇತ್ರಾವತಿ ಎಸ್.ಟಿ. ಕಾಲೋನಿ ಮಾರ್ಗವಾಗಿ ಬೆಳ್ಳೂರು ಕ್ರಾಸ್ ರಸ್ತೆಯಾಗಿ ರಾಜ್ಯ ಹೆದ್ದಾರಿ 276ರ ರಸ್ತೆಯಾದ ಸುಳ್ಯ, ಪೈಚಾರು, ಬೆಳ್ಳಾರೆ, ಸವಣೂರು, ಕುದ್ಮಾರು, ಆಲಂಕಾರು, ಸುರುಳಿ, ಮಾದೇರಿ, ಪಟ್ರಮೆ, ಧರ್ಮಸ್ಥಳ, ಮುಂಡಾಜೆ, ದಿಡುಪೆ ರಸ್ತೆಯನ್ನು ಸಂಪರ್ಕಿಸುವುದು.

Related posts

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya
error: Content is protected !!