August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಆರಂಭ

ಮಂಗಳೂರು : ಭಾರತದ ಚುನಾವಣಾ ಆಯೋಗವು ರಾಜ್ಯದಲ್ಲಿ ಇಂದಿನಿಂದ 1 ತಿಂಗಳ ಕಾಲ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮಾಡಲಿದೆ. ಈಗಾಗಲೇ ಮ್ಯಾಪಿಂಗ್ ಮುಕ್ತಾಯವಾಗಿದ್ದು, ಚುನಾವಣಾಧಿಕಾರಿಗಳು, ಬಿಎಲ್‌ಓಗಳು ಮನೆ ಮನೆಗೆ ಭೇಟಿ ಕೊಡಲಿದ್ದಾರೆ.

ಕರ್ನಾಟಕದಲ್ಲಿ  91.61% ಮ್ಯಾಪಿಂಗ್ ಆಗಿದ್ದು, 5,54,32,314 ಮತದಾರರ ಪೈಕಿ 5,07,79,810 ಮತದಾರರ ಮ್ಯಾಪಿಂಗ್ ನಡೆದಿದೆ. 46,52,504 ಮತದಾರರು ಮ್ಯಾಪಿಂಗ್ ಆಗಬೇಕಿದೆ. ಈ 5.55 ಕೋಟಿ ಮತದಾರರ ಪೈಕಿ ಅಸಲಿ ಯಾರು? ನಕಲಿ ಯಾರು? ಎನ್ನುವುದನ್ನು ಪರಿಶೀಲಿಸಲಾಗುತ್ತದೆ.

ನಕಲಿ, ಅನರ್ಹ ಮತದಾರರನ್ನು ಜರಡಿ ಹಿಡಿದು ಪಟ್ಟಿಯಿಂದ ಡಿಲೀಟ್ ಮಾಡಲಿದೆ. ಮತದಾರರು ಅರ್ಜಿಯನ್ನ ತುಂಬಿ ಅರ್ಜಿಗೆ ಸಹಿ ಮಾಡಿ ಕೆಲವು ದಾಖಲೆಗಳನ್ನು ಸಲ್ಲಿಕೆ ಮಾಡಬೇಕಿದೆ. ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಹೆಸರು ಸೇರ್ಪಡೆ ಮೃತಪಟ್ಟವರು, ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಿದ್ದಾರೆ.

ಬಿಎಲ್‌ಓಗಳು ಮನೆಗೆ ಭೇಟಿ ನೀಡಿ ಎಸ್‌ಐಆರ್ ಅರ್ಜಿ ನೀಡಲಿದ್ದಾರೆ. ಎಸ್‌ಐಆರ್ ಅರ್ಜಿಗೆ ಮಾಹಿತಿ ನೀಡಿ ಮತದಾರರು ಸಹಿ ಮಾಡಬೇಕು. ಎಸ್‌ಐಆರ್‌ನಲ್ಲಿ ಭಾಗಿಯಾಗಿ ಮಾಹಿತಿ ನೀಡಿದರೆ ಮಾತ್ರ ಮತದಾನದ ಹಕ್ಕು, ಇಲ್ಲದೇ ಹೋದರೆ ಮತದಾನದಿಂದ ವಂಚಿತರಾಗುವ ಸಾಧ್ಯತೆ ಇದೆ. ಅಕ್ಟೋಬರ್ 7, 2026ಕ್ಕೆ 18 ತುಂಬುವ ಯುವ ಮತದಾರರು ಅರ್ಜಿ ಹಾಕಬಹುದಾಗಿದೆ. ರಾಜ್ಯ ಚುನಾವಣಾ ಆಯೋಗ, ಜಿಬಿಎ ಹಾಗೂ ಜಿಲ್ಲಾಡಳಿತಗಳು ಸಕಲ ಸಿದ್ಧತೆ ಮಾಡಿಕೊಂಡಿವೆ.

ಮತದಾರರು ಯಾವ ದಾಖಲೆ ಇಟ್ಟುಕೊಳ್ಳಬೇಕು?
1. ಕುಟುಂಬದವರ ಗುರುತಿನ ಚೀಟಿ
2. ವೋಟರ್ ಐಡಿ
3. ಆಧಾರ್ ಕಾರ್ಡ್
4. ವಿಳಾಸ ದೃಢಿಕರಣ ಪತ್ರ
5. ಪಾಸ್‌ಪೋರ್ಟ್ ಸೈಜ್ ಫೋಟೋ

Related posts

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

Suddi Udaya

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ ರೂ.1.50ಲಕ್ಷ ಸಹಾಯಧನ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya
error: Content is protected !!