August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ: ಡಾಕ್ಯೂಮೆಂಟ್ ರೈಟರ್‌ಗೆ ಜೀವ ಬೆದರಿಕೆ : ಪ್ರಕರಣ ದಾಖಲು

ಬೆಳ್ತಂಗಡಿ: ಭೂ ದಾಖಲೆಗಳನ್ನು ದಾಖಲೀಕರಿಸುವ ವೇಳೆ ಪಕ್ಕದ ಜಮೀನನ್ನು ಸೇರಿಸಲಾಗಿದೆ ಎಂದು ಆರೋಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಲಾಗಿದೆ ಎಂದು ಡಾಕ್ಯೂಮೆಂಟ್ ರೈಟರ್ ರೋರ್ವರು ನೀಡಿದ ದೂರಿನಂತೆ ಕರಾಯ ನಿವಾಸಿ ಚರಣ್ ಎಂಬವರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಡಾಕ್ಯೂಮೆಂಟ್ ರೈಟರ್, ಕರಾಯ ಗ್ರಾಮದ ನಿವಾಸಿಯಾಗಿರುವ ಕೆ.ಎಸ್.ಅಬ್ದುಲ್ಲಾ ಎಂಬವರು ದೂರು ನೀಡಿದ್ದು, ‘ಜೂ.25ರಂದು ಸಂಜೆ 6 ಗಂಟೆ ವೇಳೆಗೆ ಕರಾಯದ ಪೆಟ್ರೋಲ್ ಪಂಪಿನಲ್ಲಿ ತನ್ನ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ತುಂಬಿಸಿ ಹೊರಡುವ ಸಮಯದಲ್ಲಿ ಇನ್ನೋವಾ ಕಾರಿನಲ್ಲಿ ಬಂದ ಕರಾಯ ನಿವಾಸಿ ಚರಣ್ ಎಂಬಾತ ದ್ವಿಚಕ್ರ ವಾಹನಕ್ಕೆ ಕಾರನ್ನು ಅಡ್ಡವಾಗಿರಿಸಿ ಸಂಚಾರಕ್ಕೆ ತಡೆಯೊಡ್ಡಿರುವುದಲ್ಲದೆ ಅವಾಚ್ಯ ಪದಗಳಿಂದ ತನಗೆ ನಿಂದಿಸಿರುತ್ತಾರೆ’ ಎಂದು ಆರೋಪಿಸಿದ್ದಾರೆ.

ಕರಾಯ ಗ್ರಾಮದ ವ್ಯಕ್ತಿಯೋರ್ವರ ಭೂ ದಾಖಲೆಗಳ ದಾಖಲೀಕರಣದ ವೇಳೆ ಆರೋಪಿತರ ಭೂಮಿಯೂ ಸೇರಿರುವುದಕ್ಕೆ ನಾನೇ ಕಾರಣವೆಂದು ಭಾವಿಸಿ ನನ್ನ ವಿರುದ್ಧ ಈ ಕೃತ್ಯಗೈದಿರುತ್ತಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ಉಜಿರೆಯ ಪ್ರಸಿದ್ದ ದಂತ ವೈದ್ಯರಾದ ಡಾ.ಎಂ.ಎಂ. ದಯಾಕರ್ ಗೆ ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್‌

Suddi Udaya
error: Content is protected !!