26.3 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ: ಡಾಕ್ಯೂಮೆಂಟ್ ರೈಟರ್‌ಗೆ ಜೀವ ಬೆದರಿಕೆ : ಪ್ರಕರಣ ದಾಖಲು

ಬೆಳ್ತಂಗಡಿ: ಭೂ ದಾಖಲೆಗಳನ್ನು ದಾಖಲೀಕರಿಸುವ ವೇಳೆ ಪಕ್ಕದ ಜಮೀನನ್ನು ಸೇರಿಸಲಾಗಿದೆ ಎಂದು ಆರೋಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಲಾಗಿದೆ ಎಂದು ಡಾಕ್ಯೂಮೆಂಟ್ ರೈಟರ್ ರೋರ್ವರು ನೀಡಿದ ದೂರಿನಂತೆ ಕರಾಯ ನಿವಾಸಿ ಚರಣ್ ಎಂಬವರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಡಾಕ್ಯೂಮೆಂಟ್ ರೈಟರ್, ಕರಾಯ ಗ್ರಾಮದ ನಿವಾಸಿಯಾಗಿರುವ ಕೆ.ಎಸ್.ಅಬ್ದುಲ್ಲಾ ಎಂಬವರು ದೂರು ನೀಡಿದ್ದು, ‘ಜೂ.25ರಂದು ಸಂಜೆ 6 ಗಂಟೆ ವೇಳೆಗೆ ಕರಾಯದ ಪೆಟ್ರೋಲ್ ಪಂಪಿನಲ್ಲಿ ತನ್ನ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ತುಂಬಿಸಿ ಹೊರಡುವ ಸಮಯದಲ್ಲಿ ಇನ್ನೋವಾ ಕಾರಿನಲ್ಲಿ ಬಂದ ಕರಾಯ ನಿವಾಸಿ ಚರಣ್ ಎಂಬಾತ ದ್ವಿಚಕ್ರ ವಾಹನಕ್ಕೆ ಕಾರನ್ನು ಅಡ್ಡವಾಗಿರಿಸಿ ಸಂಚಾರಕ್ಕೆ ತಡೆಯೊಡ್ಡಿರುವುದಲ್ಲದೆ ಅವಾಚ್ಯ ಪದಗಳಿಂದ ತನಗೆ ನಿಂದಿಸಿರುತ್ತಾರೆ’ ಎಂದು ಆರೋಪಿಸಿದ್ದಾರೆ.

ಕರಾಯ ಗ್ರಾಮದ ವ್ಯಕ್ತಿಯೋರ್ವರ ಭೂ ದಾಖಲೆಗಳ ದಾಖಲೀಕರಣದ ವೇಳೆ ಆರೋಪಿತರ ಭೂಮಿಯೂ ಸೇರಿರುವುದಕ್ಕೆ ನಾನೇ ಕಾರಣವೆಂದು ಭಾವಿಸಿ ನನ್ನ ವಿರುದ್ಧ ಈ ಕೃತ್ಯಗೈದಿರುತ್ತಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Suddi Udaya

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3ಕೋಟಿ ಅನುದಾನ

Suddi Udaya

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ.ಪಂ. ನಿಂದ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳಿಗೆ ದಿಢೀರ್ ಭೇಟಿ: ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ ವಶಕ್ಕೆ

Suddi Udaya

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

Suddi Udaya
error: Content is protected !!