27.5 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 10ನೇ ತಿರುವಿನ ಸಮೀಪ ಮರವೊಂದು ರಸ್ತೆಗೆ ಉರುಳಿ ಸುಮಾರು ಒಂದು ತಾಸು ಕಾಲ ಸಂಚಾರ ವ್ಯತ್ಯಯ, ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೋಮವಾರ ರಾತ್ರಿ ನಡೆದಿದೆ

.ಸಂಜೆ 7 ಗಂಟೆಗೆ ಸುಮಾರಿಗೆ ಮರ ಉರುಳಿ ಬಿದ್ದಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿ ಇಕ್ಕೆಲಗಳಲ್ಲೂ ಒಂದೂವರೆ ತಾಸಿನಷ್ಟು ಕಾಲ ವಾಹನಗಳು ಸಾಲುಗಟ್ಟಿ ನಿಂತವು. ಜೋರಾಗಿ ಸುರಿಯುತ್ತಿದ್ದ ಮಳೆ, ಮಂಜುಕವಿದ ವಾತಾವರಣ, ಬೆಳಕಿನ ಅಭಾವ ತ್ವರಿತವಾಗಿ ಮರ ತೆರವುಗೊಳಿಸಲು ಅಡ್ಡಿಯಾಯಿತು.

ಉಪವಲಯ ಅರಣ್ಯಾಧಿಕಾರಿ ರಂಜಿತ್, ಸಿಬ್ಬಂದಿಗಳಾದ ಗೋಪಾಲ, ಮನೋಹರ್, ಇಸ್ಮಾಯಿಲ್, ವಾಹನ ಸವಾರರು ಹಾಗೂ ಮತ್ತಿತರರು ಮರ ತೆರವಿಗೆ ಸಹಕರಿಸಿದರು. ಸೋಮವಾರ ಬೆಳಗಿನ ಜಾವ ಎರಡನೇ ತಿರುವಿನ ಬಳಿ ಮರ ರಸ್ತೆಗೆ ಬಾಗಿ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಘಾಟಿ ಪ್ರದೇಶದಲ್ಲಿ ನೂರಾರು ಅಪಾಯಕಾರಿ ಮರಗಳಿದ್ದು, ಜೋರಾದ ಮಳೆ ವೇಳೆ ರಸ್ತೆಗೆ ಉರುಳಿ ಸಂಚಾರಕ್ಕೆ ಸಮಸ್ತೆಯಾಗುತ್ತಿರುವುದು ಸರ್ವೇಸಾಮಾನ್ಯವಾಗಿದೆ.

Related posts

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಹಿತಿ ಮತ್ತು ಸಂವಹನ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya

ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya
error: Content is protected !!