23.8 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ಫಾ. ವಿನೋದ್ ಮಸ್ಕರೇನ್ಹಸ್ ರವರಿಗೆ ಸನ್ಮಾನ

ಬೆಳ್ತಂಗಡಿ: ಜಿಲ್ಲೆಯ ಖ್ಯಾತ ನಾಟಕ ಕಲಾವಿದ ಹಾಗೂ ನಿರೂಪಕರಾದ ಪ್ರಸನ್ನ ಶೆಟ್ಟಿ, ಬೈಲೂರು ರವರು 100ಕ್ಕೂ ಅಧಿಕ ವೇದಿಕೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ನಿರ್ದೇಶಕರಾದ ವಂ.ಫಾ| ವಿನೋದ್ ಮಸ್ಕರೇನ್ಹಸ್ ರವರನ್ನು ದಯಾ ವಿಶೇಷ ಶಾಲೆಗೆ ಭೇಟಿ ನೀಡಿ, ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜನಮನ ಗೆದ್ದಿರುವ ಫಾ. ವಿನೋದ್ ಮಸ್ಕರೇನ್ಹಸ್ ರವರ ಸಾಧನೆಯನ್ನು ಗುರುತಿಸಿ ಹಾಗೂ ಚೈತನ್ಯ ಕಲಾವಿದರು ಬೈಲೂರು ಅವರ ತಂಡವು ಈ ವರ್ಷ ರಾಘು ಮಾಸ್ಟ್ರು ನಾಟಕವು ಅತಿ ಕಡಿಮೆ ಸಮಯದಲ್ಲಿ ನೂರಕ್ಕಿಂತ ಹೆಚ್ಚು ವೇದಿಕೆಯನ್ನು ಯಶಸ್ವಿಯಾಗಿ ಪಡೆದುಕೊಂಡಿರುವ ಸಂತೋಷದ ಹಿನ್ನೆಲೆಯಲ್ಲಿ‌ ದಯಾ ವಿಶೇಷ ಶಾಲೆಯ ನಿರ್ದೇಶಕರಿಗೆ ಈ ಗೌರವವನ್ನು ಪ್ರಧಾನ ಮಾಡಲಾಗಿದೆ.ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು, ಕಲಾವಿದರು, ಅಭಿಮಾನಿಗಳು, ದಯಾ ವಿಶೇಷ ಶಾಲೆಯ ಸಿಬ್ಬಂದಿಗಳು ಹಾಗೂ ವಿಶೇಷ ಚೇತನ ಮಕ್ಕಳು ಉಪಸ್ಥಿತರಿದ್ದು, ಪ್ರಸನ್ನ ಶೆಟ್ಟಿ ಅವರ ಮುಂದಿನ ಕಲಾ ಪಯಣ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

Related posts

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಮತ್ತು ಕಾಲೇಜಿನಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!