August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ಫಾ. ವಿನೋದ್ ಮಸ್ಕರೇನ್ಹಸ್ ರವರಿಗೆ ಸನ್ಮಾನ

ಬೆಳ್ತಂಗಡಿ: ಜಿಲ್ಲೆಯ ಖ್ಯಾತ ನಾಟಕ ಕಲಾವಿದ ಹಾಗೂ ನಿರೂಪಕರಾದ ಪ್ರಸನ್ನ ಶೆಟ್ಟಿ, ಬೈಲೂರು ರವರು 100ಕ್ಕೂ ಅಧಿಕ ವೇದಿಕೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ನಿರ್ದೇಶಕರಾದ ವಂ.ಫಾ| ವಿನೋದ್ ಮಸ್ಕರೇನ್ಹಸ್ ರವರನ್ನು ದಯಾ ವಿಶೇಷ ಶಾಲೆಗೆ ಭೇಟಿ ನೀಡಿ, ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜನಮನ ಗೆದ್ದಿರುವ ಫಾ. ವಿನೋದ್ ಮಸ್ಕರೇನ್ಹಸ್ ರವರ ಸಾಧನೆಯನ್ನು ಗುರುತಿಸಿ ಹಾಗೂ ಚೈತನ್ಯ ಕಲಾವಿದರು ಬೈಲೂರು ಅವರ ತಂಡವು ಈ ವರ್ಷ ರಾಘು ಮಾಸ್ಟ್ರು ನಾಟಕವು ಅತಿ ಕಡಿಮೆ ಸಮಯದಲ್ಲಿ ನೂರಕ್ಕಿಂತ ಹೆಚ್ಚು ವೇದಿಕೆಯನ್ನು ಯಶಸ್ವಿಯಾಗಿ ಪಡೆದುಕೊಂಡಿರುವ ಸಂತೋಷದ ಹಿನ್ನೆಲೆಯಲ್ಲಿ‌ ದಯಾ ವಿಶೇಷ ಶಾಲೆಯ ನಿರ್ದೇಶಕರಿಗೆ ಈ ಗೌರವವನ್ನು ಪ್ರಧಾನ ಮಾಡಲಾಗಿದೆ.ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು, ಕಲಾವಿದರು, ಅಭಿಮಾನಿಗಳು, ದಯಾ ವಿಶೇಷ ಶಾಲೆಯ ಸಿಬ್ಬಂದಿಗಳು ಹಾಗೂ ವಿಶೇಷ ಚೇತನ ಮಕ್ಕಳು ಉಪಸ್ಥಿತರಿದ್ದು, ಪ್ರಸನ್ನ ಶೆಟ್ಟಿ ಅವರ ಮುಂದಿನ ಕಲಾ ಪಯಣ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

Related posts

ಉಜಿರೆ ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು

Suddi Udaya

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಪರೀಕ ‘ ಸೌಖ್ಯವನ’ ದಲ್ಲಿ ಸ್ವಾತಂತ್ರ್ಯ ದಿನಾಚರಣೆ:

Suddi Udaya

ಧರ್ಮಸ್ಥಳ ಗಣಪತಿ ದೇವಸ್ಥಾನದ ವ್ಯವಸ್ಥಾಪಕರಾಗಿದ್ದ ಎಂ. ಕೃಷ್ಣ ಭಟ್ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಸಮಾಜಕಾರ್ಯ ಪದವೀಧರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸಿನರ್ಜಿ ಎಚ್‌ಆರ್‌ಡಿ ಸರಣಿ ಕಾರ್ಯಕ್ರಮ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!