ಶಿಶಿಲ: 100ಕ್ಕೂ ಹೆಚ್ಚು ಯಶಸ್ವಿ ನಾಟಕ ಪ್ರದರ್ಶನಗಳನ್ನು ನೀಡಿದ ಸಂಭ್ರಮದ ಅಂಗವಾಗಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ಅವರ ತಂಡದವರು ಇಂದು ಶಿಶಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಸಂಭ್ರಮವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಸನ್ನ ಶೆಟ್ಟಿ ಅವರು, “ನಮ್ಮ ‘ರಾಘು ಮಾಸ್ಟರ್’ ನಾಟಕವು 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನಗಳನ್ನು ನೀಡಲು ಅನೇಕ ಸಂಘ-ಸಂಸ್ಥೆಗಳು ಹಾಗೂ ಶಾಲೆಗಳ ಸಹಕಾರ ಕಾರಣವಾಗಿದೆ. ಅವುಗಳಲ್ಲಿ ಶಿಶಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೂ ಒಂದು. ಆದ್ದರಿಂದ ಈ ಸಂತಸದ ಕ್ಷಣವನ್ನು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೊಂದಿಗೆ ಹಂಚಿಕೊಳ್ಳಲು ನಾವು ಇಲ್ಲಿಗೆ ಬಂದಿದ್ದೇವೆ” ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋಹನ್ ಗೌಡ, ಮುಖ್ಯಶಿಕ್ಷಕಿ ಶ್ರೀಮತಿ ಸರಸ್ವತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ ಶಿಶಿಲ, ಸದಸ್ಯರಾದ ಭುವನ್ ಕುಮಾರ್, ಮನೋಜ್, ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪ್ರಸನ್ನ ಶೆಟ್ಟಿ ಅವರ ತಂಡದ ಸದಸ್ಯರು ಉಪಸ್ಥಿತರಿದ್ದರು.ಸಂಭ್ರಮದ ಅಂಗವಾಗಿ ಎಲ್ಲರಿಗೂ ಸಿಹಿ ತಿಂಡಿ ವಿತರಿಸಿದರು.













