27.5 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

35 ವರ್ಷಗಳ ಸೇವೆಗೆ ಗೌರವದ ವಿದಾಯ-ಉಜಿರೆ ರಬ್ಬರ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಗೆ ಆತ್ಮೀಯ ಬೀಳ್ಕೊಡುಗೆ

ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸುದೀರ್ಘ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರಿಗೆ ಬೀಳ್ಕೊಡುಗೆ ಸಮಾರಂಭವು ಜೂ 30 ರಂದು ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ. ಭಿಡೆ ವಹಿಸಿ ಸುಧೀರ್ಘ ಸೇವೆಯ ಪಯಣದಲ್ಲಿ ರಾಜು ಶೆಟ್ಟಿಯವರ ಕಾರ್ಯವೈಖರಿಯನ್ನು ಕೊಂಡಾಡಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ಮಾಜಿ ಸಚಿವ ಕೆ. ಗಂಗಾಧರ ಗೌಡ, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಜು ಶೆಟ್ಟಿಯವರ ಸೇವೆಯನ್ನು ಸ್ಮರಿಸಿ ರಬ್ಬರ್ ಸೊಸೈಟಿಯ ಪರವಾಗಿ,ವಿವಿಧ ಸಂಘ-ಸಂಸ್ಥೆಗಳ ಹಾಗೂ ಸಿಬ್ಬಂದಿಗಳ ಪರವಾಗಿ ಗೌರವಪೂರ್ವಕವಾಗಿ ಸನ್ಮಾನಿಸಿ, ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ,ನಿರ್ದೇಶಕರಾದ ಜಯಶ್ರೀ ಡಿ.ಎಂ., ಆರ್. ಸುಭಾಷಿಣಿ, ಬೈರಪ್ಪ, ರಾಮ ನಾಯ್ಕ, ಸೋಮನಾಥ ಬಂಗೇರ, ಗ್ರೇಸಿಯನ್ ವೇಗಸ್, ಪದ್ಮ ಗೌಡ ಎಚ್., ಕೆ.ಜೆ. ಅಗಸ್ಟೀನ್, ತಿಮ್ಮಪ್ಪ ಗೌಡ, ಭರತ್ ಕುಮಾರ್, ಶಾಜಿ ಪಿ.ಎ., ಶಶಿಧರ ಡೋಂಗ್ರೆ, ಬಾಲಕೃಷ್ಣ ಗೌಡ,ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್ ಐ.ಎಸ್,ವ್ಯವಸ್ಥಾಪಕ ಪ್ರಕಾಶ್ ಗೌಡ ಸೇರಿದಂತೆ ಅನೇಕ ಗಣ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಬ್ಬರ್ ಸೊಸೈಟಿಯ ಹಿರಿಯ ವ್ಯವಸ್ಥಾಪಕಿ ಪದ್ಮಾವತಿ ಜೆ. ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ ಸ್ವಾಗತಿಸಿದರು. ಅಶ್ರಫ್ ಅಲಿ ಕುಂಞಿ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya
error: Content is protected !!