27.5 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ: ಡಾಕ್ಯೂಮೆಂಟ್ ರೈಟರ್‌ಗೆ ಜೀವ ಬೆದರಿಕೆ : ಪ್ರಕರಣ ದಾಖಲು

ಬೆಳ್ತಂಗಡಿ: ಭೂ ದಾಖಲೆಗಳನ್ನು ದಾಖಲೀಕರಿಸುವ ವೇಳೆ ಪಕ್ಕದ ಜಮೀನನ್ನು ಸೇರಿಸಲಾಗಿದೆ ಎಂದು ಆರೋಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಲಾಗಿದೆ ಎಂದು ಡಾಕ್ಯೂಮೆಂಟ್ ರೈಟರ್ ರೋರ್ವರು ನೀಡಿದ ದೂರಿನಂತೆ ಕರಾಯ ನಿವಾಸಿ ಚರಣ್ ಎಂಬವರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಡಾಕ್ಯೂಮೆಂಟ್ ರೈಟರ್, ಕರಾಯ ಗ್ರಾಮದ ನಿವಾಸಿಯಾಗಿರುವ ಕೆ.ಎಸ್.ಅಬ್ದುಲ್ಲಾ ಎಂಬವರು ದೂರು ನೀಡಿದ್ದು, ‘ಜೂ.25ರಂದು ಸಂಜೆ 6 ಗಂಟೆ ವೇಳೆಗೆ ಕರಾಯದ ಪೆಟ್ರೋಲ್ ಪಂಪಿನಲ್ಲಿ ತನ್ನ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ತುಂಬಿಸಿ ಹೊರಡುವ ಸಮಯದಲ್ಲಿ ಇನ್ನೋವಾ ಕಾರಿನಲ್ಲಿ ಬಂದ ಕರಾಯ ನಿವಾಸಿ ಚರಣ್ ಎಂಬಾತ ದ್ವಿಚಕ್ರ ವಾಹನಕ್ಕೆ ಕಾರನ್ನು ಅಡ್ಡವಾಗಿರಿಸಿ ಸಂಚಾರಕ್ಕೆ ತಡೆಯೊಡ್ಡಿರುವುದಲ್ಲದೆ ಅವಾಚ್ಯ ಪದಗಳಿಂದ ತನಗೆ ನಿಂದಿಸಿರುತ್ತಾರೆ’ ಎಂದು ಆರೋಪಿಸಿದ್ದಾರೆ.

ಕರಾಯ ಗ್ರಾಮದ ವ್ಯಕ್ತಿಯೋರ್ವರ ಭೂ ದಾಖಲೆಗಳ ದಾಖಲೀಕರಣದ ವೇಳೆ ಆರೋಪಿತರ ಭೂಮಿಯೂ ಸೇರಿರುವುದಕ್ಕೆ ನಾನೇ ಕಾರಣವೆಂದು ಭಾವಿಸಿ ನನ್ನ ವಿರುದ್ಧ ಈ ಕೃತ್ಯಗೈದಿರುತ್ತಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

Suddi Udaya

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

Suddi Udaya
error: Content is protected !!