27.5 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 10ನೇ ತಿರುವಿನ ಸಮೀಪ ಮರವೊಂದು ರಸ್ತೆಗೆ ಉರುಳಿ ಸುಮಾರು ಒಂದು ತಾಸು ಕಾಲ ಸಂಚಾರ ವ್ಯತ್ಯಯ, ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೋಮವಾರ ರಾತ್ರಿ ನಡೆದಿದೆ

.ಸಂಜೆ 7 ಗಂಟೆಗೆ ಸುಮಾರಿಗೆ ಮರ ಉರುಳಿ ಬಿದ್ದಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿ ಇಕ್ಕೆಲಗಳಲ್ಲೂ ಒಂದೂವರೆ ತಾಸಿನಷ್ಟು ಕಾಲ ವಾಹನಗಳು ಸಾಲುಗಟ್ಟಿ ನಿಂತವು. ಜೋರಾಗಿ ಸುರಿಯುತ್ತಿದ್ದ ಮಳೆ, ಮಂಜುಕವಿದ ವಾತಾವರಣ, ಬೆಳಕಿನ ಅಭಾವ ತ್ವರಿತವಾಗಿ ಮರ ತೆರವುಗೊಳಿಸಲು ಅಡ್ಡಿಯಾಯಿತು.

ಉಪವಲಯ ಅರಣ್ಯಾಧಿಕಾರಿ ರಂಜಿತ್, ಸಿಬ್ಬಂದಿಗಳಾದ ಗೋಪಾಲ, ಮನೋಹರ್, ಇಸ್ಮಾಯಿಲ್, ವಾಹನ ಸವಾರರು ಹಾಗೂ ಮತ್ತಿತರರು ಮರ ತೆರವಿಗೆ ಸಹಕರಿಸಿದರು. ಸೋಮವಾರ ಬೆಳಗಿನ ಜಾವ ಎರಡನೇ ತಿರುವಿನ ಬಳಿ ಮರ ರಸ್ತೆಗೆ ಬಾಗಿ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಘಾಟಿ ಪ್ರದೇಶದಲ್ಲಿ ನೂರಾರು ಅಪಾಯಕಾರಿ ಮರಗಳಿದ್ದು, ಜೋರಾದ ಮಳೆ ವೇಳೆ ರಸ್ತೆಗೆ ಉರುಳಿ ಸಂಚಾರಕ್ಕೆ ಸಮಸ್ತೆಯಾಗುತ್ತಿರುವುದು ಸರ್ವೇಸಾಮಾನ್ಯವಾಗಿದೆ.

Related posts

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ರೋಬೋಟಿಕ್ ಶಸ್ತ್ರಚಿಕಿತ್ಸೆ ಹಾಗೂ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಪೂರ್ಣಗೊಳಿಸಿದ ಮೂಳೆ ತಜ್ಞ ಡಾ. ರಜತ್ ಹೆಚ್.ಪಿ

Suddi Udaya

ಕಾಪಿನಡ್ಕದಲ್ಲಿ ಗೆಳೆಯರ ಬಳಗದಿಂದ ಶ್ರೀ ಕೃಷ್ಣಾಷ್ಟಮಿ‌ ಸಂಭ್ರಮ : ಸಾಧಕರಿಗೆ ಸನ್ಮಾನ, ಶಾಲೆಗೆ ಗೊದ್ರೇಜ್ ಹಸ್ತಾಂತರ, ಕ್ರೀಡಾಕೂಟ

Suddi Udaya

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya
error: Content is protected !!