26.3 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 10ನೇ ತಿರುವಿನ ಸಮೀಪ ಮರವೊಂದು ರಸ್ತೆಗೆ ಉರುಳಿ ಸುಮಾರು ಒಂದು ತಾಸು ಕಾಲ ಸಂಚಾರ ವ್ಯತ್ಯಯ, ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೋಮವಾರ ರಾತ್ರಿ ನಡೆದಿದೆ

.ಸಂಜೆ 7 ಗಂಟೆಗೆ ಸುಮಾರಿಗೆ ಮರ ಉರುಳಿ ಬಿದ್ದಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿ ಇಕ್ಕೆಲಗಳಲ್ಲೂ ಒಂದೂವರೆ ತಾಸಿನಷ್ಟು ಕಾಲ ವಾಹನಗಳು ಸಾಲುಗಟ್ಟಿ ನಿಂತವು. ಜೋರಾಗಿ ಸುರಿಯುತ್ತಿದ್ದ ಮಳೆ, ಮಂಜುಕವಿದ ವಾತಾವರಣ, ಬೆಳಕಿನ ಅಭಾವ ತ್ವರಿತವಾಗಿ ಮರ ತೆರವುಗೊಳಿಸಲು ಅಡ್ಡಿಯಾಯಿತು.

ಉಪವಲಯ ಅರಣ್ಯಾಧಿಕಾರಿ ರಂಜಿತ್, ಸಿಬ್ಬಂದಿಗಳಾದ ಗೋಪಾಲ, ಮನೋಹರ್, ಇಸ್ಮಾಯಿಲ್, ವಾಹನ ಸವಾರರು ಹಾಗೂ ಮತ್ತಿತರರು ಮರ ತೆರವಿಗೆ ಸಹಕರಿಸಿದರು. ಸೋಮವಾರ ಬೆಳಗಿನ ಜಾವ ಎರಡನೇ ತಿರುವಿನ ಬಳಿ ಮರ ರಸ್ತೆಗೆ ಬಾಗಿ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಘಾಟಿ ಪ್ರದೇಶದಲ್ಲಿ ನೂರಾರು ಅಪಾಯಕಾರಿ ಮರಗಳಿದ್ದು, ಜೋರಾದ ಮಳೆ ವೇಳೆ ರಸ್ತೆಗೆ ಉರುಳಿ ಸಂಚಾರಕ್ಕೆ ಸಮಸ್ತೆಯಾಗುತ್ತಿರುವುದು ಸರ್ವೇಸಾಮಾನ್ಯವಾಗಿದೆ.

Related posts

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!