August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ಫಾ. ವಿನೋದ್ ಮಸ್ಕರೇನ್ಹಸ್ ರವರಿಗೆ ಸನ್ಮಾನ

ಬೆಳ್ತಂಗಡಿ: ಜಿಲ್ಲೆಯ ಖ್ಯಾತ ನಾಟಕ ಕಲಾವಿದ ಹಾಗೂ ನಿರೂಪಕರಾದ ಪ್ರಸನ್ನ ಶೆಟ್ಟಿ, ಬೈಲೂರು ರವರು 100ಕ್ಕೂ ಅಧಿಕ ವೇದಿಕೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ನಿರ್ದೇಶಕರಾದ ವಂ.ಫಾ| ವಿನೋದ್ ಮಸ್ಕರೇನ್ಹಸ್ ರವರನ್ನು ದಯಾ ವಿಶೇಷ ಶಾಲೆಗೆ ಭೇಟಿ ನೀಡಿ, ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜನಮನ ಗೆದ್ದಿರುವ ಫಾ. ವಿನೋದ್ ಮಸ್ಕರೇನ್ಹಸ್ ರವರ ಸಾಧನೆಯನ್ನು ಗುರುತಿಸಿ ಹಾಗೂ ಚೈತನ್ಯ ಕಲಾವಿದರು ಬೈಲೂರು ಅವರ ತಂಡವು ಈ ವರ್ಷ ರಾಘು ಮಾಸ್ಟ್ರು ನಾಟಕವು ಅತಿ ಕಡಿಮೆ ಸಮಯದಲ್ಲಿ ನೂರಕ್ಕಿಂತ ಹೆಚ್ಚು ವೇದಿಕೆಯನ್ನು ಯಶಸ್ವಿಯಾಗಿ ಪಡೆದುಕೊಂಡಿರುವ ಸಂತೋಷದ ಹಿನ್ನೆಲೆಯಲ್ಲಿ‌ ದಯಾ ವಿಶೇಷ ಶಾಲೆಯ ನಿರ್ದೇಶಕರಿಗೆ ಈ ಗೌರವವನ್ನು ಪ್ರಧಾನ ಮಾಡಲಾಗಿದೆ.ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು, ಕಲಾವಿದರು, ಅಭಿಮಾನಿಗಳು, ದಯಾ ವಿಶೇಷ ಶಾಲೆಯ ಸಿಬ್ಬಂದಿಗಳು ಹಾಗೂ ವಿಶೇಷ ಚೇತನ ಮಕ್ಕಳು ಉಪಸ್ಥಿತರಿದ್ದು, ಪ್ರಸನ್ನ ಶೆಟ್ಟಿ ಅವರ ಮುಂದಿನ ಕಲಾ ಪಯಣ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

Related posts

ಬೆಳ್ತಂಗಡಿ: ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ನಾಯಕರ ಆಯ್ಕೆ

Suddi Udaya

ಜ.7: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya
error: Content is protected !!