23.8 C
ಪುತ್ತೂರು, ಬೆಳ್ತಂಗಡಿ
July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ಫಾ. ವಿನೋದ್ ಮಸ್ಕರೇನ್ಹಸ್ ರವರಿಗೆ ಸನ್ಮಾನ

ಬೆಳ್ತಂಗಡಿ: ಜಿಲ್ಲೆಯ ಖ್ಯಾತ ನಾಟಕ ಕಲಾವಿದ ಹಾಗೂ ನಿರೂಪಕರಾದ ಪ್ರಸನ್ನ ಶೆಟ್ಟಿ, ಬೈಲೂರು ರವರು 100ಕ್ಕೂ ಅಧಿಕ ವೇದಿಕೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ನಿರ್ದೇಶಕರಾದ ವಂ.ಫಾ| ವಿನೋದ್ ಮಸ್ಕರೇನ್ಹಸ್ ರವರನ್ನು ದಯಾ ವಿಶೇಷ ಶಾಲೆಗೆ ಭೇಟಿ ನೀಡಿ, ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜನಮನ ಗೆದ್ದಿರುವ ಫಾ. ವಿನೋದ್ ಮಸ್ಕರೇನ್ಹಸ್ ರವರ ಸಾಧನೆಯನ್ನು ಗುರುತಿಸಿ ಹಾಗೂ ಚೈತನ್ಯ ಕಲಾವಿದರು ಬೈಲೂರು ಅವರ ತಂಡವು ಈ ವರ್ಷ ರಾಘು ಮಾಸ್ಟ್ರು ನಾಟಕವು ಅತಿ ಕಡಿಮೆ ಸಮಯದಲ್ಲಿ ನೂರಕ್ಕಿಂತ ಹೆಚ್ಚು ವೇದಿಕೆಯನ್ನು ಯಶಸ್ವಿಯಾಗಿ ಪಡೆದುಕೊಂಡಿರುವ ಸಂತೋಷದ ಹಿನ್ನೆಲೆಯಲ್ಲಿ‌ ದಯಾ ವಿಶೇಷ ಶಾಲೆಯ ನಿರ್ದೇಶಕರಿಗೆ ಈ ಗೌರವವನ್ನು ಪ್ರಧಾನ ಮಾಡಲಾಗಿದೆ.ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು, ಕಲಾವಿದರು, ಅಭಿಮಾನಿಗಳು, ದಯಾ ವಿಶೇಷ ಶಾಲೆಯ ಸಿಬ್ಬಂದಿಗಳು ಹಾಗೂ ವಿಶೇಷ ಚೇತನ ಮಕ್ಕಳು ಉಪಸ್ಥಿತರಿದ್ದು, ಪ್ರಸನ್ನ ಶೆಟ್ಟಿ ಅವರ ಮುಂದಿನ ಕಲಾ ಪಯಣ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya
error: Content is protected !!