ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆಯು ಜೂ.29 ರಂದು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ವಹಿಸಿದರು.

ವಲಯ ಮಟ್ಟದಲ್ಲಿ ನಡೆಯುವ ಲೇಡಿ ಜೆಸಿ ಹಾಗೂ ಜೂನಿಯರ್ ಜೆಸಿ ಸಮ್ಮೇಳನ ಸಿಂಧು ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರ್ಣಯಿಸಲಾಯಿತು. ಮುಂದಿನ ತಿಂಗಳಲ್ಲಿ ಫಲ್ಗುಣಿ ಪ್ರಾಂತ್ಯದ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿಗೆ ತಯಾರಿ ನಡೆಸಲಾಯಿತು. ಮಧ್ಯಾಂತರ ಸಮ್ಮೇಳನದಲ್ಲಿ ಪ್ರಶಸ್ತಿಗಳನ್ನು ಪಡೆದ ಘಟಕದ ಅಧ್ಯಕ್ಷರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಅದೇ ರೀತಿ ವಲಯಾಧ್ಯಕ್ಷರಿಂದ ಬಿಡುಗಡೆಗೊಂಡ ಕಪಿಲಾವಾಣಿ ಮೊದಲ ಸಂಚಿಕೆಗೆ ಸಂಪಾದಕರಾದ ಜಸ್ವಂತ್ ಪಿರೇರಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ದೀಪಾ ವಿ. ವಾಚಿಸಿದರು. ಜೂನ್ ತಿಂಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿದ ಜೂನಿಯರ್ ಜೆಸಿ ಅಧ್ಯಕ್ಷರಾದ ಆದ್ಯಾ ಜೈನ್, ಜೊತೆ ಕಾರ್ಯದರ್ಶಿ ಜೋಯ್ ಬೊತೆಲ್ಲೊ, ಜೆಸಿಂತಾ ಡಿಸೋಜ ಅವರಿಗೆ ಶುಭಾಶಯವನ್ನು ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ವಲಯ ಉಪಾಧ್ಯಕ್ಷರಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಜಿತೇಶ್ ಎಲ್. ಪಿರೇರಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ನಿಕಟಪೂರ್ವ ಅಧ್ಯಕ್ಷೆ ಡಾ. ಶೋಭಾ ಪಿ., ಕೆ. ಶ್ರೀಧರ ರಾವ್, ಸಂತೋಷ್ ಜೈನ್, ವಿಕ್ಟರ್ ಸುವಾರಿಸ್, ಚಂದನಾ ಪಿ., ಜೋಸೆಫ್ ಪಿರೇರಾ ಹಾಗೂ ದಕ್ಷಾ ಜೈನ್ ಸಭೆಯಲ್ಲಿ ಭಾಗವಹಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ವಂದಿಸಿದರು.













