23.8 C
ಪುತ್ತೂರು, ಬೆಳ್ತಂಗಡಿ
July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ರಾಘು ಮಾಸ್ಟರ್’ ನಾಟಕ 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನ: ಶಿಶಿಲ ಶಾಲೆಯಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ತಂಡದವರಿಂದ ಸಂಭ್ರಮಾಚರಣೆ

ಶಿಶಿಲ: 100ಕ್ಕೂ ಹೆಚ್ಚು ಯಶಸ್ವಿ ನಾಟಕ ಪ್ರದರ್ಶನಗಳನ್ನು ನೀಡಿದ ಸಂಭ್ರಮದ ಅಂಗವಾಗಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ಅವರ ತಂಡದವರು ಇಂದು ಶಿಶಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಸಂಭ್ರಮವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಸನ್ನ ಶೆಟ್ಟಿ ಅವರು, “ನಮ್ಮ ‘ರಾಘು ಮಾಸ್ಟರ್’ ನಾಟಕವು 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನಗಳನ್ನು ನೀಡಲು ಅನೇಕ ಸಂಘ-ಸಂಸ್ಥೆಗಳು ಹಾಗೂ ಶಾಲೆಗಳ ಸಹಕಾರ ಕಾರಣವಾಗಿದೆ. ಅವುಗಳಲ್ಲಿ ಶಿಶಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೂ ಒಂದು. ಆದ್ದರಿಂದ ಈ ಸಂತಸದ ಕ್ಷಣವನ್ನು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೊಂದಿಗೆ ಹಂಚಿಕೊಳ್ಳಲು ನಾವು ಇಲ್ಲಿಗೆ ಬಂದಿದ್ದೇವೆ” ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋಹನ್ ಗೌಡ, ಮುಖ್ಯಶಿಕ್ಷಕಿ ಶ್ರೀಮತಿ ಸರಸ್ವತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ ಶಿಶಿಲ, ಸದಸ್ಯರಾದ ಭುವನ್ ಕುಮಾರ್, ಮನೋಜ್, ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪ್ರಸನ್ನ ಶೆಟ್ಟಿ ಅವರ ತಂಡದ ಸದಸ್ಯರು ಉಪಸ್ಥಿತರಿದ್ದರು.ಸಂಭ್ರಮದ ಅಂಗವಾಗಿ ಎಲ್ಲರಿಗೂ ಸಿಹಿ ತಿಂಡಿ ವಿತರಿಸಿದರು.

Related posts

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಫಾಸ್ಟ್ ಫೈವ್ ಪುರುಷರ ಹಾಗೂ ಮಹಿಳೆಯರ ನೆಟ್‌ಬಾಲ್ ಚಾಂಪಿಯನ್‌ಶಿಪ್‌: ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya
error: Content is protected !!