August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ರಾಘು ಮಾಸ್ಟರ್’ ನಾಟಕ 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನ: ಶಿಶಿಲ ಶಾಲೆಯಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ತಂಡದವರಿಂದ ಸಂಭ್ರಮಾಚರಣೆ

ಶಿಶಿಲ: 100ಕ್ಕೂ ಹೆಚ್ಚು ಯಶಸ್ವಿ ನಾಟಕ ಪ್ರದರ್ಶನಗಳನ್ನು ನೀಡಿದ ಸಂಭ್ರಮದ ಅಂಗವಾಗಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ಅವರ ತಂಡದವರು ಇಂದು ಶಿಶಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಸಂಭ್ರಮವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಸನ್ನ ಶೆಟ್ಟಿ ಅವರು, “ನಮ್ಮ ‘ರಾಘು ಮಾಸ್ಟರ್’ ನಾಟಕವು 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನಗಳನ್ನು ನೀಡಲು ಅನೇಕ ಸಂಘ-ಸಂಸ್ಥೆಗಳು ಹಾಗೂ ಶಾಲೆಗಳ ಸಹಕಾರ ಕಾರಣವಾಗಿದೆ. ಅವುಗಳಲ್ಲಿ ಶಿಶಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೂ ಒಂದು. ಆದ್ದರಿಂದ ಈ ಸಂತಸದ ಕ್ಷಣವನ್ನು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೊಂದಿಗೆ ಹಂಚಿಕೊಳ್ಳಲು ನಾವು ಇಲ್ಲಿಗೆ ಬಂದಿದ್ದೇವೆ” ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋಹನ್ ಗೌಡ, ಮುಖ್ಯಶಿಕ್ಷಕಿ ಶ್ರೀಮತಿ ಸರಸ್ವತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ ಶಿಶಿಲ, ಸದಸ್ಯರಾದ ಭುವನ್ ಕುಮಾರ್, ಮನೋಜ್, ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪ್ರಸನ್ನ ಶೆಟ್ಟಿ ಅವರ ತಂಡದ ಸದಸ್ಯರು ಉಪಸ್ಥಿತರಿದ್ದರು.ಸಂಭ್ರಮದ ಅಂಗವಾಗಿ ಎಲ್ಲರಿಗೂ ಸಿಹಿ ತಿಂಡಿ ವಿತರಿಸಿದರು.

Related posts

ಪ್ರಾಥಮಿಕ ವಿಭಾಗದ ಕರಾಟೆ ಪಂದ್ಯಾಟ : ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya

ಕಡಿರುದ್ಯಾವರ: ಕಾನರ್ಪ ನಿವಾಸಿ ಶ್ರೀನಿವಾಸ ಪ್ರಭು ನಿಧನ

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya
error: Content is protected !!