26.3 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಸಿ ರವರನ್ನು ಭೇಟಿ ಮಾಡಿದ ಬೆಳ್ತಂಗಡಿ ಪ.ಪಂ. ಹಾಗೂ ಗ್ರಾ.ಪಂ. ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು

ಬೆಳ್ತಂಗಡಿ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಸಿ ರವರನ್ನು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಬೆಳ್ತಂಗಡಿ ತಾಲೂಕು ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು ಜೂ. 28 ರಂದು ಭೇಟಿ ಮಾಡಿ ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

ನೇರಪಾವತಿ ಪೌರ ಕಾರ್ಮಿಕರನ್ನು ಖಾಯಂ ಮಾಡಬೇಕು , ಲೋಡರ್ಸ್ , ಕ್ಲೀನರ್ಸ ಗಳಿಗೆ ನೇರ ಪಾವತಿ ಮಾಡಬೇಕು , ಪೌರ ಕಾರ್ಮಿಕರಿಗೆ ನಿವೇಶನ , ವಸತಿ ಸೌಕರ್ಯ ಒದಗಿಸಬೇಕು , ಗ್ರಾಮ ಪಂಚಾಯತ್ ಸ್ವಚ್ಚತಾ ಕಾರ್ಯಗಳನ್ನು ಸಂಜೀವಿನಿ ಒಕ್ಕೂಟದಿಂದ ಕೈಬಿಡಬೇಕು , ಗ್ರಾಮ ಪಂಚಾಯತ್ ಸ್ವಚ್ಚತಾ ಕಾರ್ಮಿಕರಿಗೆ ಏಕರೂಪದ ವೇತನ ನೀಡಬೇಕು , ಗ್ರಾಮ ಪಂಚಾಯತ್ ಗಳಲ್ಲಿ ಕೈಬಿಟ್ಟ ಸ್ವಚ್ಚತಾ ಕಾರ್ಮಿಕರನ್ನು ವಾಪಸ್ ಕೆಲಸಕ್ಕೆ ಸೇರ್ಪಡೆ ಮಾಡಬೇಕು , ಪೌರ ಕಾರ್ಮಿಕರು ಸೇರಿದಂತೆ ಗ್ರಾಮ ಪಂಚಾಯತ್ ಸ್ವಚ್ಚತಾ ಕಾರ್ಮಿಕರ ಮೇಲಿನ ಅಧಿಕಾರಿಗಳ ದೌರ್ಜನ್ಯ ನಿಲ್ಲಬೇಕು , ಪೌರ ಕಾರ್ಮಿಕರ ವಿಶ್ರಾಂತಿ ಕೊಠಡಿಯನ್ನು ದುರಸ್ತಿಗೊಳಿಸಬೇಕು ಎಂದು ಆಯೋಗದ ಅಧ್ಯಕ್ಷರ ಗಮನಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಸುದೆಮುಗೇರು , ಜೊತೆ ಕಾರ್ಯದರ್ಶಿ ಸುರೇಶ್ ಕೆ ಅರಳಿ , ಮುಖಂಡರಾದ ಶಿವಕುಮಾರ್ ಪುಂಜಾಲಕಟ್ಟೆ , ಉಮೇಶ್ ಪುಂಜಾಲಕಟ್ಟೆ , ಸಂದೀಪ್ ಅರಳಿ, ವಸಂತ ಕೊಯ್ಯೂರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪೌರ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕಂಕನಾಡಿ , ಕಾರ್ಯದರ್ಶಿ ಎಸ್.ಪಿ‌ ಆನಂದ್ ಮತ್ತು ಪದಾಧಿಕಾರಿಗಳು ಜೊತೆಗಿದ್ದರು.

Related posts

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಡಗಕಾರಂದೂರು ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರ ಸ್ಥಳಾಂತರ

Suddi Udaya

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya
error: Content is protected !!