27.5 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಸಿ ರವರನ್ನು ಭೇಟಿ ಮಾಡಿದ ಬೆಳ್ತಂಗಡಿ ಪ.ಪಂ. ಹಾಗೂ ಗ್ರಾ.ಪಂ. ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು

ಬೆಳ್ತಂಗಡಿ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಸಿ ರವರನ್ನು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಬೆಳ್ತಂಗಡಿ ತಾಲೂಕು ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು ಜೂ. 28 ರಂದು ಭೇಟಿ ಮಾಡಿ ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

ನೇರಪಾವತಿ ಪೌರ ಕಾರ್ಮಿಕರನ್ನು ಖಾಯಂ ಮಾಡಬೇಕು , ಲೋಡರ್ಸ್ , ಕ್ಲೀನರ್ಸ ಗಳಿಗೆ ನೇರ ಪಾವತಿ ಮಾಡಬೇಕು , ಪೌರ ಕಾರ್ಮಿಕರಿಗೆ ನಿವೇಶನ , ವಸತಿ ಸೌಕರ್ಯ ಒದಗಿಸಬೇಕು , ಗ್ರಾಮ ಪಂಚಾಯತ್ ಸ್ವಚ್ಚತಾ ಕಾರ್ಯಗಳನ್ನು ಸಂಜೀವಿನಿ ಒಕ್ಕೂಟದಿಂದ ಕೈಬಿಡಬೇಕು , ಗ್ರಾಮ ಪಂಚಾಯತ್ ಸ್ವಚ್ಚತಾ ಕಾರ್ಮಿಕರಿಗೆ ಏಕರೂಪದ ವೇತನ ನೀಡಬೇಕು , ಗ್ರಾಮ ಪಂಚಾಯತ್ ಗಳಲ್ಲಿ ಕೈಬಿಟ್ಟ ಸ್ವಚ್ಚತಾ ಕಾರ್ಮಿಕರನ್ನು ವಾಪಸ್ ಕೆಲಸಕ್ಕೆ ಸೇರ್ಪಡೆ ಮಾಡಬೇಕು , ಪೌರ ಕಾರ್ಮಿಕರು ಸೇರಿದಂತೆ ಗ್ರಾಮ ಪಂಚಾಯತ್ ಸ್ವಚ್ಚತಾ ಕಾರ್ಮಿಕರ ಮೇಲಿನ ಅಧಿಕಾರಿಗಳ ದೌರ್ಜನ್ಯ ನಿಲ್ಲಬೇಕು , ಪೌರ ಕಾರ್ಮಿಕರ ವಿಶ್ರಾಂತಿ ಕೊಠಡಿಯನ್ನು ದುರಸ್ತಿಗೊಳಿಸಬೇಕು ಎಂದು ಆಯೋಗದ ಅಧ್ಯಕ್ಷರ ಗಮನಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಸುದೆಮುಗೇರು , ಜೊತೆ ಕಾರ್ಯದರ್ಶಿ ಸುರೇಶ್ ಕೆ ಅರಳಿ , ಮುಖಂಡರಾದ ಶಿವಕುಮಾರ್ ಪುಂಜಾಲಕಟ್ಟೆ , ಉಮೇಶ್ ಪುಂಜಾಲಕಟ್ಟೆ , ಸಂದೀಪ್ ಅರಳಿ, ವಸಂತ ಕೊಯ್ಯೂರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪೌರ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕಂಕನಾಡಿ , ಕಾರ್ಯದರ್ಶಿ ಎಸ್.ಪಿ‌ ಆನಂದ್ ಮತ್ತು ಪದಾಧಿಕಾರಿಗಳು ಜೊತೆಗಿದ್ದರು.

Related posts

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ: ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ, ನವಕ ಕಲಶಾಭಿಷೇಕ

Suddi Udaya

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

Suddi Udaya
error: Content is protected !!