August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಪ್ರಕಾಶ್ ಕೆ ರವರಿಗೆ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಕಳೆದ ನಾಲ್ಕು ತಿಂಗಳ ಹಿಂದೆ ಮರದಿಂದ ಬಿದ್ದು ಅಸ್ವಸ್ಥಗೊಂಡು ನಡೆದಾಡಲು ಕಷ್ಟಕರವಾಗಿದ್ದ ಪ್ರಕಾಶ್ ಕೆ ಇವರಿಗೆ ಜನಮಂಗಲ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಶಿಲ ಗ್ರಾಮದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ವೀಲ್ ಚೇರ್ ವಿತರಿಸಿದರು.

ಕಾರ್ಯಕ್ರಮದಲ್ಲಿ ಅರಸಿನಮಕ್ಕಿ ವಲಯದ ಮತ್ತು ಹೇವಾಜೆ ಒಕ್ಕೂಟದ ಅಧ್ಯಕ್ಷ ಗಣೇಶ್ ಪ್ರಸಾದ್, ಶಿಶಿಲ ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ, ಮೇಲ್ವಿಚಾರಕರು ಪ್ರಿಯ, ಸೇವಾ ಪ್ರತಿನಿಧಿ ರಶ್ಮಿತಾ, ಶಿಶಿಲ ಅರಸಿನಮಕ್ಕಿ ಘಟಕದ ಘಟಕ ಪ್ರತಿನಿಧಿ ಅವಿನಾಶ್ ಬಿಢೆ ಮತ್ತು ತಂಡದ ಸದಸ್ಯರಾದ ಸುರೇಶ್ ಶಿಬಾಜೆ ,ರಮೇಶ್ ಬೈರಕಟ್ಟ, ಕೃಷ್ಣಪ್ಪಗೌಡ, ಸೀನಪ್ಪ ,ಸೋಮಶೇಖರ ಗೌಡ , ಸ್ಥಳೀಯರಾದ ಮೀನಾಕ್ಷಿ ಮತ್ತು ಅಶ್ವಸ್ಥಗೊಂಡ ವ್ಯಕ್ತಿಯ ಮನೆಯವರು ಭಾಗವಹಿಸಿದ್ದರು.

Related posts

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

Suddi Udaya

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!